ಕೇರಳ ಪ್ರವಾಹವನ್ನು ರಾಷ್ಟ್ರೀಯ ವಿಪತ್ತಾಗಿ ಘೋಷಿಸಿ: ಪ್ರಧಾನಿಗೆ ರಾಹುಲ್ ಗಾಂಧಿ ಮನವಿ

ಕೇರಳ ಪ್ರವಾಹವನ್ನು ರಾಷ್ಟ್ರೀಯ ವಿಪತ್ತು ಎಂದು ಘೋಷಿಸುವಂತೆ ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ಪ್ರಧಾನಿ ನರೇಂದ್ರಮೋದಿ ಅವರಿಗೆ ಮನವಿ ಮಾಡಿದ್ದಾರೆ.
ಕೇರಳ ಪ್ರವಾಹ
ಕೇರಳ ಪ್ರವಾಹ
Updated on
ನವದೆಹಲಿ: ಕೇರಳ ಪ್ರವಾಹವನ್ನು ರಾಷ್ಟ್ರೀಯ ವಿಪತ್ತು ಎಂದು ಘೋಷಿಸುವಂತೆ ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ಪ್ರಧಾನಿ ನರೇಂದ್ರಮೋದಿ ಅವರಿಗೆ ಮನವಿ ಮಾಡಿದ್ದಾರೆ.
ಆಗಸ್ಟ್ 8 ರಿಂದ ಉಂಟಾಗಿರುವ ಪ್ರವಾಹದಿಂದಾಗಿ  324 ಜನರು ಸಾವನ್ನಪ್ಪಿದ್ದು, ಸುಮಾರು 3.14 ಲಕ್ಷ ಜನರು ಪರಿಹಾರ ಶಿಬಿರಗಳಲ್ಲಿ ಆಶ್ರಯ ಪಡೆದಿದ್ದಾರೆ.ಮಿಲಿಯನ್ ಜನರ  ಮುಂದಿನ ಬದುಕಿಗಾಗಿ  ಕೇರಳ  ಪ್ರವಾಹವನ್ನು ವಿಳಂಬ ನೀತಿ ಅನುಸರಿಸದೆ ರಾಷ್ಟ್ರೀಯ ವಿಪತ್ತು ಎಂದು ಘೋಷಿಸಬೇಕೆಂದು ರಾಹುಲ್ ಗಾಂಧಿ ಟ್ವಿಟರ್ ಮೂಲಕ ಪ್ರಧಾನಿಗೆ ಮನವಿ ಮಾಡಿಕೊಂಡಿದ್ದಾರೆ.
ಅಗತ್ಯವಿರುವವರಿಗೆ ಸಹಾಯ ಮಾಡಲು ನಮ್ಮ ಎಲ್ಲಾ ಸಂಪನ್ಮೂಲಗಳನ್ನು ಮತ್ತು ಜನರನ್ನು ಕೇಂದ್ರೀಕರಿಸಿ ಎಂದು ರಾಹುಲ್ ಗಾಂಧಿ ಮತ್ತೊಂದು ಟ್ವೀಟ್ ನಲ್ಲಿ ತಿಳಿಸಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com