ಆಗಸ್ಟ್ 8 ರಿಂದ ಉಂಟಾಗಿರುವ ಪ್ರವಾಹದಿಂದಾಗಿ 324 ಜನರು ಸಾವನ್ನಪ್ಪಿದ್ದು, ಸುಮಾರು 3.14 ಲಕ್ಷ ಜನರು ಪರಿಹಾರ ಶಿಬಿರಗಳಲ್ಲಿ ಆಶ್ರಯ ಪಡೆದಿದ್ದಾರೆ.ಮಿಲಿಯನ್ ಜನರ ಮುಂದಿನ ಬದುಕಿಗಾಗಿ ಕೇರಳ ಪ್ರವಾಹವನ್ನು ವಿಳಂಬ ನೀತಿ ಅನುಸರಿಸದೆ ರಾಷ್ಟ್ರೀಯ ವಿಪತ್ತು ಎಂದು ಘೋಷಿಸಬೇಕೆಂದು ರಾಹುಲ್ ಗಾಂಧಿ ಟ್ವಿಟರ್ ಮೂಲಕ ಪ್ರಧಾನಿಗೆ ಮನವಿ ಮಾಡಿಕೊಂಡಿದ್ದಾರೆ.