ಮಣಿಶಂಕರ್ ಅಯ್ಯರ್ ಅಮಾನತು ಆದೇಶ ಹಿಂಪಡೆದ ಕಾಂಗ್ರೆಸ್

ಮಣಿಶಂಕರ್ ಅಯ್ಯರ್ ಅವರನ್ನು ಅಮಾನತುಗೊಳಿಸಿ ಪಕ್ಷದ ಶಿಸ್ತು ಸಮಿತಿ ಹೊರಡಿಸಿದ್ದ ಆದೇಶವನ್ನು ಕಾಂಗ್ರೆಸ್ ಪಕ್ಷ ಹಿಂಪಡೆದಿದೆ.
ಮಣಿಶಂಕರ್ ಅಯ್ಯರ್
ಮಣಿಶಂಕರ್ ಅಯ್ಯರ್
ನವದೆಹಲಿ: ಮಣಿಶಂಕರ್ ಅಯ್ಯರ್ ಅವರನ್ನು ಅಮಾನತುಗೊಳಿಸಿ ಪಕ್ಷದ ಶಿಸ್ತು ಸಮಿತಿ ಹೊರಡಿಸಿದ್ದ ಆದೇಶವನ್ನು ಕಾಂಗ್ರೆಸ್ ಪಕ್ಷ ಹಿಂಪಡೆದಿದೆ. 
2017 ರ ಡಿಸೆಂಬರ್ ತಿಂಗಳಲ್ಲಿ ನಡೆದ ಗುಜರಾತ್ ಚುನಾವಣೆ ವೇಳೆ ಪ್ರಧಾನಿ ನರೇಂದ್ರ ಮೋದಿ ವಿರುದ್ಧ ಅವಹೇಳನಕಾರಿ, ಅಸಾಂವಿಧಾನಿಕ ಶಬ್ದ ಪ್ರಯೋಗಿಸಿದ್ದ ಕಾರಣ ಕಾಂಗ್ರೆಸ್ ನಿಂದ ಮಣಿಶಂಕರ್ ಅಯ್ಯರ್ ಅವರನ್ನು ಅಮಾನತುಗೊಳಿಸಲಾಗಿತ್ತು. ಶಿಸ್ತು ಕ್ರಮ ಕೈಗೊಂಡ ನಂತರ ಮಣಿಶಂಕರ್ ಅಯ್ಯರ್ ತಮ್ಮ ಹೇಳಿಕೆ ಬಗ್ಗೆ ವಿಷಾದ ವ್ಯಕ್ತಪಡಿಸಿದ್ದರು. ಶಿಸ್ತು ಸಮಿತಿ ಆದೇಶವನ್ನು ಹಿಂಪಡೆಯುವ ನಿರ್ಧಾರಕ್ಕೆ ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ ಅನುಮೋದನೆ ನೀಡಿದ್ದಾರೆ. 

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com