ವ್ಯಾಟಿಕನ್: ಜಲಪ್ರವಾಹಕ್ಕೆ ತುತ್ತಾಗಿರುವ ಕೇರಳ ರಾಜ್ಯದ ಜನತೆಗೆ ಸಹಾಯ ಮಾಡುವಂತೆ ಅಂತಾರಾಷ್ಟ್ರೀಯ ಸಮುದಾಯಕ್ಕೆ ಪೋಪ್ ಫ್ರಾನ್ಸಿಸ್ ಕರೆ ನೀಡಿದ್ದಾರೆ.
ವ್ಯಾಟಿಕನ್ ನ್ಯೂಸ್ ವರದಿಯ ಪ್ರಕಾರ ಪೋಪ್ ಫ್ರಾನ್ಸಿಸ್ ಕೇರಳದ ಸಂತ್ರಸ್ತರಿಗಾಗಿ ಪ್ರಾರ್ಥನೆ ಸಲ್ಲಿಸಿದ್ದಾರೆ ಎಂದು ತಿಳಿದುಬಂದಿದೆ. ಕೇರಳದಲ್ಲಿನ ಭೀಕರ ಮಳೆಯಿಂದಾಗಿ ಅಲ್ಲಿನ ಜನಜೀವನ ಅಸ್ತವ್ಯಸ್ಥಗೊಂಡಿದೆ. ಅಲ್ಲಿನ ಜನತೆಗೆ ಸಹಾಯ ಮಾಡಲು ಅಂತಾರಾಷ್ಟ್ರೀಯ ಸಮುದಾಯ ಮುಂದಾಗಬೇಕೆಂದು ಪೋಪ್ ಹೇಳಿದ್ದಾರೆ.