ಪಂಜಾಬ್ ರಾಜ್ಯದ ಕಾಂಗ್ರೆಸ್ ಸಚಿವರಾಗಿರುವ ಸಿಧು ಅವರು ಶುಕ್ರವಾರ ನಡೆದಿದ್ದ ಮಾಜಿ ಪ್ರಧಾನಿ ವಾಜಪೇಯಿಯವರ ಅಂತ್ಯಸಂಸ್ಕಾರಕ್ಕೆ ಗೈರು ಹಾಜರಾಗಿ, ಪಾಕಿಸ್ತಾನದಲ್ಲಿ ನಡೆದ ಇಮ್ರಾನ್ ಖಾನ್ ಅವರ ಪ್ರಮಾಣವಚನ ಸ್ವೀಕಾರ ಸಮಾರಂಭಕ್ಕೆ ಹಾಜರಾಗಿದ್ದರು. ಸಿಧು ಅವರ ಈ ನಡೆಗೆ ಹರಿಯಾಣ ಹಾಗೂ ಪಂಜಾಬ್ ರಾಜ್ಯಗಳಲ್ಲಿ ತೀವ್ರ ಖಂಡನೆ ವ್ಯಕ್ತವಾಗತೊಡಗಿದೆ.