ಕೇರಳ ಪ್ರವಾಹ ಪರಿಹಾರ ನಿಧಿಗೆ ಸುಪ್ರೀಂ ಕೋರ್ಟ್ ನ್ಯಾಯಾಧೀಶರಿಂದ ನೆರವು: ಸಿಜೆಐ

ಸುಪ್ರೀಂ ಕೋರ್ಟ್ ನ 25 ನ್ಯಾಯಾಧೀಶರು ಕೇರಳದ ನೆರೆ ಸಂತ್ರಸ್ತರಿಗೆ ಪರಿಹಾರ ನೀಡುವುದಕ್ಕೆ ಆರ್ಥಿಕ ನೆರವು ನೀಡಲಿದ್ದಾರೆ ಎಂದು ಸುಪ್ರೀಂ ಕೋರ್ಟ್ ನ ಮುಖ್ಯ ನ್ಯಾಯಮೂರ್ತಿ ದೀಪಕ್ ಮಿಶ್ರಾ ಹೇಳಿದ್ದಾರೆ.
ಸುಪ್ರೀಂ ಕೋರ್ಟ್
ಸುಪ್ರೀಂ ಕೋರ್ಟ್
Updated on
ನವದೆಹಲಿ: ಸುಪ್ರೀಂ ಕೋರ್ಟ್ ನ 25 ನ್ಯಾಯಾಧೀಶರು ಕೇರಳದ ನೆರೆ ಸಂತ್ರಸ್ತರಿಗೆ ಪರಿಹಾರ ನೀಡುವುದಕ್ಕೆ ಆರ್ಥಿಕ ನೆರವು ನೀಡಲಿದ್ದಾರೆ ಎಂದು ಸುಪ್ರೀಂ ಕೋರ್ಟ್ ನ ಮುಖ್ಯ ನ್ಯಾಯಮೂರ್ತಿ ದೀಪಕ್ ಮಿಶ್ರಾ ಹೇಳಿದ್ದಾರೆ. 
ಪಿಐಎಲ್ ವಿಚಾರಣೆ ವೇಳೆ ಸುಪ್ರೀಂ ಕೋರ್ಟ್ ನ ಸಿಜೆಐ ಹಾಗೂ ನ್ಯಾಯಮೂರ್ತಿಗಳಾದ ಎಎಂ ಖನ್ವಾಲಿಕರ್ ಹಾಗೂ ಡಿವೈ ಚಂದ್ರಚೂಡ್ ಈ ಹೇಳಿಕೆ ನೀಡಿದ್ದು,  ಪಿಐಎಲ್ ಅರ್ಜಿದಾರರು ಅನುಚಿತವಾದ ಅರ್ಜಿ ಸಲ್ಲಿಸಿದ್ದಕ್ಕಾಗಿ 25 ಲಕ್ಷ ರೂಪಾಯಿ ದಂಡ ವಿಧಿಸಲಾಗಿತ್ತು. ಈ ಮೊತ್ತವನ್ನು ಕೇರಳ ಮುಖ್ಯಮಂತ್ರಿಗಳ ಪರಿಹಾರ ನಿಧಿಗೆ ತಲುಪಿಸುವುದು ಸೂಕ್ತ ಎಂದು ಅಟಾರ್ನಿ ಜನರಲ್ ಕೆ.ಕೆ ವೇಣುಗೋಪಾಲ್ ಅಭಿಪ್ರಾಯಪಟ್ಟಿದ್ದರು. 
ಅಟಾರ್ನಿ ಜನರಲ್ ಅವರ ಅಭಿಪ್ರಾಯಕ್ಕೆ ಪ್ರತಿಕ್ರಿಯೆ ನೀಡಿರುವ ಸುಪ್ರೀಂ ಕೋರ್ಟ್ ನ ಮುಖ್ಯನ್ಯಾಯಾಧೀಶರು ನಾವೂ ಸಹ ಕೇರಳ ನೆರೆ ಸಂತ್ರಸ್ತರಿಗೆ ಪರಿಹಾರ ನೀಡುವುದಕ್ಕ ಆರ್ಥಿಕ ನೆರವು ನೀಡುತ್ತೇವೆ ಎಂದು ಹೇಳಿದ್ದಾರೆ. ಸುಪ್ರೀಂ ಕೋರ್ಟ್ ನ ಮೂಲಗಳ ಪ್ರಕಾರ ನ್ಯಾಯಾಧೀಶರು ತಲಾ 25,000 ರೂಪಾಯಿ ಪರಿಹಾರ ನಿಧಿಗೆ ನೀಡಲಿದ್ದಾರೆ ಎಂದು ತಿಳಿದುಬಂದಿದೆ. 
ಅಟಾರ್ನಿ ಜನರಲ್ ಅವರ ಪುತ್ರ ಅಡ್ವೋಕೇಟ್ ಕೃಷ್ಣನ್ ವೇಣುಗೋಪಾಲ್ ಅವರೂ 15 ಲಕ್ಷ ರೂಪಾಯಿ ಆರ್ಥಿಕ ನೆರವು ನೀಡಿದ್ದಾರೆ. 

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com