ಇನ್ನು ಸಂತ್ರಸ್ತರಿಗೆ ಅಗತ್ಯವಿರುವ ವಸ್ತುಗಳನ್ನು ಹೊರಗಿನಿಂದ ತರಿಸಿಕೊಳ್ಳಬೇಕಿದ್ದು, ಇದಕ್ಕಾಗಿ ವಿಧಿಸಲಾಗುವ ಸೀಮಾ ಸುಂಕ ಹಾಗೂ ಐಜಿಎಸ್ ತಿ ಗಳಿಗೆ ವಿನಾಯ್ತಿ ನೀಡಲು ಕೇಂದ್ರ ಸರ್ಕಾರ ನಿರ್ಧರಿಸಿದೆ. ಇನ್ನು ಇದೇ ವೇಳೆ ಆಹಾರ ಪೂರೈಕೆ ಇಲಾಖೆ ರಾಜ್ಯ ಸರ್ಕಾರದ ಮನವಿಯ ಮೇರೆಗೆ ಸುಮಾರು 89,540 ಮೆಟ್ರಿಕ್ ಟನ್ ನಷ್ಟು ಹೆಚ್ಚುವರಿ ಅಕ್ಕಿಯನ್ನು ನೀಡಿದ್ದು, 100 ಮೆಟ್ರಿಕ್ ಟನ್ ನಷ್ಟು ಕಾಳುಗಳನ್ನು ಪೂರೈಕೆ ಮಾಡಲಾಗುತ್ತಿದೆ.