ಯುಎಇ ನೆರವು ಪಡೆಯಲು ಯಾವುದೇ ಅಡ್ಡಿ ಇಲ್ಲ; ಪ್ರಧಾನಿಯೊಂದಿಗೆ ಮಾತನಾಡುತ್ತೇನೆ: ಪಿಣರಾಯಿ ವಿಜಯನ್

ಕೇರಳ ನೆರೆ ಸಂತ್ರಸ್ತರಿಗೆ ಯುಎಇ ನೀಡಿರುವ ಆರ್ಥಿಕ ನೆರವು ಪಡೆಯುವುದಕ್ಕೆ ಯಾವುದೇ ಅಡ್ಡಿ ಇಲ್ಲ, ಈ ಬಗ್ಗೆ ಪ್ರಧಾನಿ ನರೇಂದ್ರ ಮೋದಿ ಅವರೊಂದಿಗೆ ಮಾತನಾಡುತ್ತೇನೆ ಎಂದು ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಹೇಳಿದ್ದಾರೆ.
ಯುಎಇ ನೆರವು ಪಡೆಯಲು ಯಾವುದೇ ಅಡ್ಡಿ ಇಲ್ಲ: ಪ್ರಧಾನಿಯೊಂದಿಗೆ ಮಾತನಾಡುತ್ತೇನೆ: ಪಿಣರಾಯಿ ವಿಜಯನ್
ಯುಎಇ ನೆರವು ಪಡೆಯಲು ಯಾವುದೇ ಅಡ್ಡಿ ಇಲ್ಲ: ಪ್ರಧಾನಿಯೊಂದಿಗೆ ಮಾತನಾಡುತ್ತೇನೆ: ಪಿಣರಾಯಿ ವಿಜಯನ್
Updated on
ಕೇರಳ ನೆರೆ ಸಂತ್ರಸ್ತರಿಗೆ ಯುಎಇ  ನೀಡಿರುವ ಆರ್ಥಿಕ ನೆರವು ಪಡೆಯುವುದಕ್ಕೆ ಯಾವುದೇ ಅಡ್ಡಿ ಇಲ್ಲ, ಈ ಬಗ್ಗೆ ಪ್ರಧಾನಿ ನರೇಂದ್ರ ಮೋದಿ ಅವರೊಂದಿಗೆ ಮಾತನಾಡುತ್ತೇನೆ ಎಂದು ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಹೇಳಿದ್ದಾರೆ. 
ನೆರೆ ಸಂತ್ರಸ್ತರಿಗೆ ವಿದೇಶಗಳು ನೀಡಿರುವ ಆರ್ಥಿಕ ನೆರವನ್ನು ಸ್ವೀಕರಿಸುವುದಕ್ಕೆ ಕೇಂದ್ರ ಸರ್ಕಾರ ಹಿಂದೇಟು ಹಾಕುತ್ತಿರುವುದರ ಬಗ್ಗೆ ಪ್ರತಿಕ್ರಿಯೆ ನೀಡಿರುವ ಪಿಣರಾಯಿ ವಿಜಯನ್, ಕೇರಳ ನೆರೆ ಸಂತ್ರಸ್ತರಿಗೆ ಯುಎಇ  ನೀಡಿರುವ ಆರ್ಥಿಕ ನೆರವು ಪಡೆಯುವುದಕ್ಕೆ ಯಾವುದೇ ಅಡ್ಡಿ ಇಲ್ಲ. ಅಗತ್ಯವಿದ್ದಲ್ಲಿ ಪ್ರಧಾನಿ ಜೊತೆಗೂ ಮಾತುಕತೆ ನಡೆಸುವುದಾಗಿ ವಿಜಯನ್ ತಿಳಿಸಿದ್ದಾರೆ. 
2016 ರ ವಿಪತ್ತು ನಿರ್ವಹಣಾ ನೀತಿಯನ್ನು ಉಲ್ಲೇಖಿಸಿರುವ ವಿಜಯನ್ ನೆರೆ ಸಂತ್ರಸ್ತರಿಗೆ ವಿದೇಶಗಳು ಆರ್ಥಿಕ ನೆರವು ನೀಡಿದರೆ ಅದನ್ನು ಸ್ವೀಕರಿಸಬಹುದು ಎಂದು ಹೇಳಿದ್ದಾರೆ. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com