ಪಶ್ಚಿಮ ಬಂಗಾಳ: ಟಿಎಂಸಿ ಕಚೇರಿ ಬಳಿ ಸ್ಫೋಟ; ಒಬ್ಬರ ಸಾವು, ಐವರಿಗೆ ಗಾಯ

ಪಶ್ಚಿಮ ಬಂಗಾಳ ರಾಜ್ಯದ ಮಿಡ್ನಾಪುರ ಜಿಲ್ಲೆಯ ಮ್ಯಾಕ್ರಾಮ್ ಪುರ ದಲ್ಲಿನ ತೃಣಮೂಲಕ ಕಾಂಗ್ರೆಸ್ ಕಚೇರಿ ಬಳಿ ಇಂದು ಸಂಭವಿಸಿದ ಸ್ಫೋಟದಲ್ಲಿ ಒಬ್ಬರು ಸಾವನ್ನಪ್ಪಿದ್ದು, ಐವರು ತೀವ್ರವಾಗಿ ಗಾಯಗೊಂಡಿದ್ದಾರೆ ಎಂದು ಅಧಿಕೃತ ಮೂಲಗಳಿಂದ ತಿಳಿದುಬಂದಿದೆ.
ಸ್ಫೋಟ ಸಂಭವಿಸಿದ ಪ್ರದೇಶ
ಸ್ಫೋಟ ಸಂಭವಿಸಿದ ಪ್ರದೇಶ
Updated on

ಮಿಡ್ನಾಪುರ : ಪಶ್ಚಿಮ ಬಂಗಾಳ ರಾಜ್ಯದ ಮಿಡ್ನಾಪುರ ಜಿಲ್ಲೆಯ ಮ್ಯಾಕ್ರಾಮ್ ಪುರ ದಲ್ಲಿನ ತೃಣಮೂಲಕ ಕಾಂಗ್ರೆಸ್ ಕಚೇರಿ ಬಳಿ ಇಂದು ಸಂಭವಿಸಿದ ಸ್ಫೋಟದಲ್ಲಿ  ಒಬ್ಬರು ಸಾವನ್ನಪ್ಪಿದ್ದು, ಐವರು ತೀವ್ರವಾಗಿ ಗಾಯಗೊಂಡಿದ್ದಾರೆ ಎಂದು ಅಧಿಕೃತ ಮೂಲಗಳಿಂದ ತಿಳಿದುಬಂದಿದೆ.

ಬೆಳಗ್ಗೆ 10 ಗಂಟೆ ಸುಮಾರಿನಲ್ಲಿ ಸ್ಫೋಟ ಸಂಭವಿಸಿದ್ದು, ಘಟನೆಯಲ್ಲಿ ಮೃತಪಟ್ಟ  ಹಾಗೂ ಗಾಯಾಳುಗಳ  ಪರಿಚಯ ತಿಳಿದುಬಂದಿಲ್ಲ. ಸ್ಟೋಟದ ಸುದ್ದಿ ತಿಳಿಯುತ್ತಿದ್ದಂತೆ ಸ್ಥಳದಲ್ಲಿ ಜಮಾಯಿಸಿದ ಪೊಲೀಸರು  ಗಾಯಾಳುಗಳನ್ನು ಆಸ್ಪತ್ರೆಗೆ ಸೇರಿಸಿ ಚಿಕಿತ್ಸೆ  ಒದಗಿಸಿದ್ದಾರೆ.

ಕಚ್ಚಾ ಬಾಂಬ್ ಸ್ಫೋಟಗೊಂಡಿದೆಯೆ ಅಥವಾ ಪಕ್ಷದ ಕಚೇರಿಯಲ್ಲಿ ಗ್ಯಾಸ್ ಸಿಲಿಂಡರ್  ಸಿಡಿದು ಘಟನೆ ಸಂಭವಿಸಿದೆಯೇ  ಎಂಬುದು ಕೂಡ ತಿಳಿದುಬಂದಿಲ್ಲ . ಸ್ಫೋಟದ ರಭಸಕ್ಕೆ  ಟಿಎಂಸಿ ಕಚೇರಿಯ ಗೋಡೆ ಧ್ವಂಸಗೊಂಡಿದೆ. ಏಕಾಏಕಿ ಸ್ಫೋಟ ಸಂಭವಿಸಿದ್ದರಿಂದ ಸ್ಥಳದಲ್ಲಿ ಆತಂಕದ ವಾತಾವರಣ ನಿರ್ಮಾಣವಾಗಿತ್ತು.
ಮಧ್ಯಾಹ್ನದ ವರೆಗೂ ಘಟನೆಗೆ ನಿಖರ ಕಾರಣ ತಿಳಿದುಬಂದಿಲ್ಲ.  ಪೊಲೀಸರು ತನಿಖೆ ನಡೆಸುತ್ತಿದ್ದಾರೆ ಎಂದು ನಾರಾಯಣ್ ಘರ್ ಟಿಎಂಸಿ ಶಾಸಕ ಪ್ರದ್ಯೂತ್ ಗೋಷ್ ತಿಳಿಸಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com