ಉನ್ನಾವೋ ಪ್ರಕರಣದ ಸಾಕ್ಷಿ ಅನುಮಾನಾಸ್ಪದ ಸಾವು: ಪ್ರಧಾನಿ ವಿರುದ್ಧ ರಾಹುಲ್ ವಾಗ್ದಾಳಿ

ಉನ್ನಾವೋ ಅತ್ಯಾಚಾರ ಪ್ರಕರಣದ ಸಾಕ್ಷಿಯ ಅನುಮಾನಾಸ್ಪದ ಸಾವಿನ ಬಗ್ಗೆ ರಾಹುಲ್ ಗಾಂಧಿ ಪ್ರತಿಕ್ರಿಯಿಸಿದ್ದು, ಪ್ರಧಾನಿ ನರೇಂದ್ರ ಮೋದಿ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.
ರಾಹುಲ್ ಗಾಂಧಿ
ರಾಹುಲ್ ಗಾಂಧಿ
ನವದೆಹಲಿ: ಉನ್ನಾವೋ ಅತ್ಯಾಚಾರ ಪ್ರಕರಣದ ಸಾಕ್ಷಿಯ ಅನುಮಾನಾಸ್ಪದ ಸಾವಿನ ಬಗ್ಗೆ ರಾಹುಲ್ ಗಾಂಧಿ ಪ್ರತಿಕ್ರಿಯಿಸಿದ್ದು, ಪ್ರಧಾನಿ ನರೇಂದ್ರ ಮೋದಿ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. 
ಬಿಜೆಪಿ ಶಾಸಕ ಕುಲ್ದೀಪ್ ಸೆಂಗಾರ್ ಆರೋಪಿಯಾಗಿರುವ ಪ್ರಕರಣದ ಸಾಕ್ಷಿ ಒಬ್ಬರು ಅನುಮಾನಾಸ್ಪದ ರೀತಿಯಲ್ಲಿ ಮೃತಪಟ್ಟಿದ್ದು, ಶವಪರೀಕ್ಷೆಯನ್ನೂ ಮಾಡದೇ ಅಂತ್ಯಕ್ರಿಯೆ ನಡೆಸಲಾಗಿದೆ. ಈ ಬಗ್ಗೆ ಅಸಮಾಧಾನ ವ್ಯಕ್ತಪಡಿಸಿರುವ ರಾಹುಲ್ ಗಾಂಧಿ, ಸಾಕ್ಷ್ಯ ಮೃತಪಟ್ಟಿರುವ ಘಟನೆಯಲ್ಲಿ ಷಡ್ಯಂತ್ರ ನಡೆಸಲಾಗಿರುವ ಸಾಧ್ಯತೆ ಇದೆ ಎಂದು ಆರೋಪಿಸಿದ್ದಾರೆ. ಇದು ನೀವು ಹೆಣ್ಣು ಮಕ್ಕಳಿಗೆ ನ್ಯಾಯ ಒದಗಿಸುವ ವಿಧಾನವ ಮಿಸ್ಟರ್ 56 ಎಂದು ಟ್ವೀಟ್ ಮೂಲಕ ರಾಹುಲ್ ಗಾಂಧಿ ಪ್ರಧಾನಿ ನರೇಂದ್ರ ಮೋದಿ ಅವರನ್ನು ಪ್ರಶ್ನಿಸಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com