ರಾಂಚಿ: ಮೇವು ಹಗರಣ ಕೇಸಿನಲ್ಲಿ ಬಿಹಾರ ಮಾಜಿ ಮುಖ್ಯಮಂತ್ರಿ ಆರ್ ಜೆಡಿ ಮುಖ್ಯಸ್ಥ ಲಾಲೂ ಪ್ರಸಾದ್ ಯಾದವ್ ಅವರ ಜಾಮೀನು ಅವಧಿಯನ್ನು ವಿಸ್ತರಿಸಲು ಜಾರ್ಖಂಡ್ ಹೈಕೋರ್ಟ್ ನಿರಾಕರಿಸಿದೆ ಅಲ್ಲದೆ ಆಗಸ್ಟ್ 30ರೊಳಗೆ ನ್ಯಾಯಾಲಯಕ್ಕೆ ಹಾಜರಾಗುವಂತೆ ಹೇಳಿದೆ. ವೈದ್ಯಕೀಯ ಪರೀಕ್ಷೆ, ಅನಾರೋಗ್ಯ ಹಿನ್ನಲೆಯಲ್ಲಿ ಆಗಸ್ಟ್ 27ರವರೆಗೆ ಜಾಮೀನಿನಲ್ಲಿರುವ ಲಾಲೂ ಪ್ರಸಾದ್ ಯಾದವ್ ಮತ್ತೆ 3 ತಿಂಗಳವರೆಗೆ ವಿಸ್ತರಿಸುವಂತೆ ಕೋರಿದ್ದರು.
ಲಾಲೂ ಪ್ರಸಾದ್ ಯಾದವ್ ಅವರು ಪ್ರಸ್ತುತ ಮುಂಬೈಯ ಏಷಿಯಾನ್ ಹಾರ್ಟ್ ಇನ್ಸ್ ಟಿಟ್ಯೂಟ್ ನಲ್ಲಿ ದಾಖಲಾಗಿದ್ದಾರೆ. ಇನ್ನು ಮುಂದೆ ರಾಂಚಿಯ ರಾಜೇಂದ್ರ ವೈದ್ಯಕೀಯ ವಿಜ್ಞಾನ ಸಂಸ್ಥೆಯಲ್ಲಿ ಚಿಕಿತ್ಸೆ ಪಡೆಯಲಿದ್ದಾರೆ ಎಂದು ಅವರ ಪರ ವಕೀಲ ಪ್ರಭಾತ್ ಕುಮಾರ್ ಸುದ್ದಿ ಸಂಸ್ಥೆಗೆ ತಿಳಿಸಿದ್ದಾರೆ.
Advertisement