ಕೇರಳಕ್ಕೆ ವಿದೇಶಗಳು ನೀಡಲು ಮುಂದಾಗಿರುವ ಆರ್ಥಿಕ ನೆರವನ್ನು ಸ್ವೀಕರಿಸದೇ ಇರಲು ನಿರ್ಧರಿಸಿರುವುದರ ಬೆನ್ನಲ್ಲೇ ಕೇಂದ್ರ ಗೃಹ ಇಲಾಖೆ ಈ ಹೇಳಿಕೆ ನೀಡಿದ್ದು, ಈಗ ಬಿಡುಗಡೆ ಮಾಡಿರುವ 600 ಕೋಟಿಯಷ್ಟು ಹಣ ಕೇವಲ ಮುಂಗಡ ಹಣವಷ್ಟೇ ಎಂದು ಹೇಳಿದೆ. ಇನ್ನೂ ಹೆಚ್ಚಿನ ಅನುದಾನವನ್ನು ರಾಜ್ಯಕ್ಕೆ ಉಂಟಾಗಿರುವ ನಷ್ಟವನ್ನು ಪರಿಶೀಲಿಸಿದ ನಂತರ ಬಿಡುಗಡೆ ಮಾಡಲಾಗುತ್ತದೆ ಎಂದು ಹೇಳಿಕೆಯಲ್ಲಿ ತಿಳಿಸಲಾಗಿದೆ.