ಕೇರಳ ಪ್ರವಾಹ ಸಂತ್ರಸ್ತರಿಗೆ ನೆರವನ್ನು ಅಧಿಕೃತವಾಗಿ ಪ್ರಕಟಿಸಿಲ್ಲ- ಯುಎಇ ಸ್ಪಷ್ಟನೆ

ಕೇರಳ ಪ್ರವಾಹ ಸಂತ್ರಸ್ತರಿಗೆ ಯುಎಇ ನೆರವು ನೀಡುವುದರ ಬಗ್ಗೆ ಸಾಕಷ್ಟು ಗೊಂದಲಗಳು ಉಂಟಾಗಿತ್ತು. ಈಗ ಸ್ವತಃ ಯುಎಇ ರಾಯಭಾರಿ ಕಚೇರಿ ಅಧಿಕಾರಿಗಳು ಎಲ್ಲಾ ಗೊಂದಲಗಳಿಗೂ ತೆರೆ ಎಳೆದಿದ್ದಾರೆ.
ಕೇರಳ ಪ್ರವಾಹ: ನೆರವನ್ನು ಇನ್ನೂ ಅಂತಿಮಗೊಳಿಸಿಲ್ಲ- ಯುಎಇ  ಸ್ಪಷ್ಟನೆ
ಕೇರಳ ಪ್ರವಾಹ: ನೆರವನ್ನು ಇನ್ನೂ ಅಂತಿಮಗೊಳಿಸಿಲ್ಲ- ಯುಎಇ ಸ್ಪಷ್ಟನೆ
Updated on
ನವದೆಹಲಿ: ಕೇರಳ ಪ್ರವಾಹ ಸಂತ್ರಸ್ತರಿಗೆ ಯುಎಇ ನೆರವು ನೀಡುವುದರ ಬಗ್ಗೆ ಸಾಕಷ್ಟು ಗೊಂದಲಗಳು ಉಂಟಾಗಿತ್ತು. ಈಗ ಸ್ವತಃ ಯುಎಇ ರಾಯಭಾರಿ ಕಚೇರಿ ಅಧಿಕಾರಿಗಳು ಎಲ್ಲಾ ಗೊಂದಲಗಳಿಗೂ ತೆರೆ ಎಳೆದಿದ್ದಾರೆ. 
ಸಂತ್ರಸ್ತರಿಗೆ ನೆರವು ನೀಡುವುದರ ಸಂಬಂಧ ಪ್ರತಿಕ್ರಿಯೆ ನೀಡಿರುವ ದೆಹಲಿಯಲ್ಲಿನ ಯುಎಇ ರಾಯಭಾರಿ ಅಧಿಕಾರಿಕಾರಿಗಳು,  ಕೇರಳ ಪ್ರವಾಹ ಪರಿಹಾರಕ್ಕಾಗಿ ಯಾವುದೇ ರೀತಿಯ ನೆರವನ್ನೂ ಅಂತಿಮಗೊಳಿಸಿಲ್ಲ ಎಂದು ಮಾಹಿತಿ ನೀಡಿದ್ದಾರೆ. 
ಯುಎಇ ಅಧಿಕೃತವಾಗಿ ಕೇರಳಕ್ಕೆ ಆರ್ಥಿಕ ನೆರವನ್ನು ಘೋಷಿಸಿಲ್ಲ. ನೆರವಿಗೆ ಸಂಬಂಧಿಸಿದಂತೆ ಭಾರತ ಸರ್ಕಾರಕ್ಕೆ ನಾವು ಯಾವುದೇ ರೀತಿಯ ಮಾಹಿತಿಯನ್ನೂ ನೀಡಿಲ್ಲ.  ಆದರೆ ಕೇರಳ ಸಂತ್ರಸ್ತರಿಗೆ ಯಾವ ರೀತಿ ನೆರವು ನೀಡಬಹುದು ಎಂಬುದನ್ನು ಇನ್ನು ಕೆಲವೇ ದಿನಗಳಲ್ಲಿ ತೀರ್ಮಾನಿಸುವ ಸಾಧ್ಯತೆ ಇದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. 
ಕೇರಳದ ಸಂತ್ರಸ್ತರಿಗೆ ನೆರವು ನೀಡುವುದರ ಸಂಬಂಧ ಯುಎಇ ರಾಷ್ಟ್ರಮಟ್ಟದ ಸಮಿತಿಯೊಂದನ್ನು ರಚಿಸಿತ್ತು ಎಂದಷ್ಟೇ ಯುಎಇ ರಾಯಭಾರಿ ಕಚೇರಿ ಅಧಿಕಾರಿಗಳು ತಿಳಿಸಿದ್ದಾರೆ. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com