ರಾಹುಲ್ ಗಾಂಧಿಯವರು ಉದ್ದೇಶಪೂರ್ವಕವಾಗಿ ಈ ರೀತಿಯ ಹೇಳಿಕೆಗಳನ್ನು ನೀಡಿದ್ದು, ದೇಶದಲ್ಲಿ ಅಶಾಂತಿ ಮೂಡಿಸುವ ಪ್ರಯತ್ನ ಮಾಡಿದ್ದಾರೆ. ಅವರ ಹೇಳಿಕೆಗಳಿಂದ ದೇಶದಲ್ಲಿ ಪ್ರತಿಭಟನೆಗಳು ನಡೆಯುವ ಸಾಧ್ಯತೆಗಳಿವೆ. ಕಾಂಗ್ರೆಸ್ ನಾಯಕನ ಈ ಹೇಳಿಕೆಗಳಿಂದ ನನಗೆ ಬಹಳ ನೋವಾಗಿದೆ ಎಂದು ದೂರಿನಲ್ಲಿ ಹೇಳಿರುವ ಸುಧೀರ್ ಅವರು, ರಾಹುಲ್ ವಿರುದ್ಧ ಐಪಿಸಿ ಸೆಕ್ಷನ್ 153 ಬಿ (ರಾಷ್ಟ್ರೀಯ ಸಮಗ್ರತೆಗೆ ಪೂರ್ವಗ್ರಹ ಸಮರ್ಥನೆಗಳು), 500 (ಮಾನನಷ್ಟ), 504 (ಜನರನ್ನು ಪ್ರಚೋದಿಸಲು ಅವಮಾನ ಮಾಡುವುದು)ರ ಅಡಿಯಲ್ಲಿ ಪ್ರಕರಣ ದಾಖಲಿಸಿದ್ದಾರೆ.