ಇನ್ನು ಕಾಮಗಾರಿ ಸ್ಥಳಕ್ಕೆ ಗುಜರಾತ್ ಮುಖ್ಯಮಂತ್ರಿ ವಿಜಯ್ ರೂಪಾನಿ ಮತ್ತು ಉಪ ಮುಖ್ಯಮಂತ್ರಿ ನಿತಿನ್ ಪಟೇಲ್ ಅವರು ಭೇಟಿ ನೀಡಿ ಕಾಮಗಾರಿ ಪರಿಶೀಲಿಸಿದರು. ಈ ವೇಳೆ ಮಾತನಾಡಿದ ಸಿಎಂ ವಿಜಯ್ ರೂಪಾನಿ ಅವರು, ಸೆಪ್ಟೆಂಬರ್ 10ರೊಳಗೆ ಉಕ್ಕಿನ ಪ್ರತಿಮ ಕಾರ್ಯ ಪೂರ್ಣಗೊಳ್ಳಲ್ಲಿದ್ದು, ಅಕ್ಟೋಬರ್ 20ರೊಳಗೆ ಅದರ ಕಂಚಿನ ಲೇಪನ ಕಾರ್ಯ ಪೂರ್ಣಗೊಳ್ಳುತ್ತದೆ ಎಂದು ಹೇಳಿದರು.