ಮತಯಂತ್ರಗಳ ದೋಷಗಳಿಂದಾಗಿ ಜನತೆ ಚುನಾವಣೆಯಲ್ಲಿ ಪಾಲ್ಗೊಳ್ಳುವುದಿಲ್ಲ, ಇದು ಪ್ರಜಾಪ್ರಭುತ್ವಕ್ಕೆ ಮಾರಕ, ಆದ್ದರಿಂದ ಚುನಾವಣೆಗಳನ್ನು ಬ್ಯಾಲೆಟ್ ಪೇಪರ್ ನಲ್ಲೆ ನಡೆಸಬೇಕೆಂದು ಶರದ್ ಯಾದವ್ ಹೇಳಿದ್ದಾರೆ. 2019 ರ ಲೋಕಸಭಾ ಚುನಾವಣೆಗೆ ಸಂಬಂಧಿಸಿದಂತೆ ಎಲ್ಲಾ ಪಕ್ಷದ ನಾಯಕರೊಂದಿಗೆ ಕೇಂದ್ರ ಚುನಾವಣಾ ಆಯೋಗ ಸಭೆ ನಡೆಸುವ ಸಂದರ್ಭದಲ್ಲೆ ಶರದ್ ಯಾದವ್ ಅವರ ಈ ಹೇಳಿಕೆ ಮಹತ್ವ ಪಡೆದುಕೊಂಡಿದೆ.