ಸಮಾಜವಾದಿ ಪಕ್ಷದ ಉಚ್ಛಾಟಿತ ನಾಯಕ ಅಮರ್ ಸಿಂಗ್ ಅಜಂ ಖಾನ್ ರನ್ನು ಪರೋಕ್ಷವಾಗಿ ದೇಶದ್ರೋಹಿ ಎಂದು ಕರೆದಿದ್ದು, ಅವರು ಈ ದೇಶದಲ್ಲಿ ಜೀವಿಸಲು ಯೋಗ್ಯರಲ್ಲ. ದೇಶ ವಿಭಜನೆ ಸಂದರ್ಭದಲ್ಲಿ ಉಂಟಾಗದ ಕೋಮುಗಲಭೆ ಅವರು ಅಧಿಕಾರದಲ್ಲಿದ್ದಾಗ ವ್ಯಾಪಕವಾಗಿ ಆಗಿತ್ತು ಎಂದು ಕಿಡಿಕಾರಿದ್ದಾರೆ. ಅಲ್ಲದೆ ತಮ್ಮ ಪತ್ನಿ ಮತ್ತು ಮಗಳ ಮೇಲೆ ಆ್ಯಸಿಡ್ ದಾಳಿ ಮಾಡಿ ನನ್ನನ್ನು ಕೊಲ್ಲಬೇಕು ಎಂದು ಅಜಂ ಖಾನ್ ಹೇಳಿದ್ದರು ಎಂದು ಅಮರ್ ಸಿಂಗ್ ಗಂಭೀರ ಆರೋಪ ಮಾಡಿದ್ದಾರೆ.