'ಬಂಧನಕ್ಕೊಳಗಾದವರಲ್ಲಿ ಕೆಲವರ ಪರಿಚಯ ತನಗಿದೆ. ಎಲ್ಲಾ ವಿಷಯದಲ್ಲೂ ತಾನು ಅವರೊಂದಿಗೆ ಸಹಮತ ಹೊಂದಿರಲಿಲ್ಲ. ಹಿಂಸೆಯ ಬಗ್ಗೆ ಅವರು ಪ್ರಚೋದನೆಯೂ ನೀಡಿರಲಿಲ್ಲ. ಅವರು ಹಿಂಸೆಯಲ್ಲಿ ತೊಡಗಿರಲಿಲ್ಲ. ಆದಿವಾಸಿ ನೆಲವಾದ ಭಾರತದಲ್ಲಿ ಏನು ನಡೆಯುತ್ತಿದೆ?. ಕೊಲೆ, ಅತ್ಯಾ ಚಾರ, ಇವರು ಬುಡಕಟ್ಟು ಜನರನ್ನು ಪ್ರತಿನಿಧಿಸುತ್ತಿದ್ದ ವಕೀಲರು. ಇವರ ಬಂಧನವು ಆದಿವಾಸಿಗಳನ್ನು ಕೋರ್ಟ್ ನಲ್ಲಿ ಪ್ರತಿನಿಧಿಸುವವರಿಲ್ಲದಂತೆ ಮಾಡುತ್ತದೆ. ಇಂದು ಮಹಾತ್ಮಾ ಗಾಂಧಿ ಬದುಕಿದ್ದರೆ, ಸುಧಾ ಭಾರದ್ವಾಜ್ ರನ್ನು ಅವರು ನ್ಯಾಯಾಲಯದಲ್ಲಿ ಬೆಂಬಲಿಸುತ್ತಿದ್ದರು ಎಂದು ನಾನು ಗಾಂಧೀಜಿಯ ಆತ್ಮಚರಿತ್ರೆಕಾರನಾಗಿ ಹೇಳಬಲ್ಲೆ. ಆದರೆ ಮೋದಿ ಸರ್ಕಾರ ಅವರನ್ನೂ ವಶಕ್ಕೆ ಪಡೆದು ಬಂಧಿಸುತ್ತಿರಲಿಲ್ಲವೇ ಎಂದು ಊಹಿಸುತ್ತಿದ್ದೆ ಎಂದು ಗುಹಾ ಹೇಳಿದ್ದಾರೆ.