ನವದೆಹಲಿ: ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ಆ.31 ರಿಂದ ಕೈಲಾಸ ಮಾನಸ ಸರೋವರ ಯಾತ್ರೆ ಕೈಗೊಳ್ಳಲಿದ್ದಾರೆ.
ಕಾಂಗ್ರೆಸ್ ಪಕ್ಷ ನೀಡಿರುವ ಮಾಹಿತಿಯ ಪ್ರಕಾರ ರಾಹುಲ್ ಗಾಂಧಿ 4-5 ದಿನಗಳ ಕಾಲ ಕೈಲಾಸ ಮಾನಸ ಸರೋವರ ಯಾತ್ರೆಯನ್ನು ಕೈಗೊಳ್ಳಲಿದ್ದಾರೆ. ಶಿವ ಭಕ್ತರಾಗಿರುವ ರಾಹುಲ್ ಗಾಂಧಿ ಕರ್ನಾಟಕ ಚುನಾವಣೆಯ ನಂತರ ಇದೇ ಮೊದಲ ಬಾರಿಗೆ ಧಾರ್ಮಿಕ ಯಾತ್ರೆ ಕೈಗೊಂಡಿದ್ದಾರೆ.