ಟಾಲಿವುಡ್ ನಟ ಹರಿಕೃಷ್ಣ ನಿಧನ: ಆಘಾತ ವ್ಯಕ್ತಪಡಿಸಿದ ಸಿಎಂ ಚಂದ್ರಬಾಬು ನಾಯ್ಡು

ಟಾಲಿವುಡ್ ನಟ ನಂದಮೂರಿ ಹರಿಕೃಷ್ಣ ಅವರು ಭೀಕರ ಅಪಘಾತದಲ್ಲಿ ನಿಧನರಾಗಿದ್ದು, ಹರಿಕೃಷ್ಣ ಅವರ ಅಕಾಲಿಕ ಸಾವಿಗೆ ಆಂಧ್ರಪ್ರದೇಶ ಮುಖ್ಯಮಂತ್ರಿ ಆಘಾತ ವ್ಯಕ್ತಪಡಿಸಿದ್ದಾರೆ...
ಸಿಎಂ ಚಂದ್ರಬಾಬು ನಾಯ್ಡು
ಸಿಎಂ ಚಂದ್ರಬಾಬು ನಾಯ್ಡು
Updated on
ಅಮರಾವತಿ: ಟಾಲಿವುಡ್ ನಟ ನಂದಮೂರಿ ಹರಿಕೃಷ್ಣ ಅವರು ಭೀಕರ ಅಪಘಾತದಲ್ಲಿ ನಿಧನರಾಗಿದ್ದು, ಹರಿಕೃಷ್ಣ ಅವರ ಅಕಾಲಿಕ ಸಾವಿಗೆ ಆಂಧ್ರಪ್ರದೇಶ ಮುಖ್ಯಮಂತ್ರಿ ಆಘಾತ ವ್ಯಕ್ತಪಡಿಸಿದ್ದಾರೆ. 
ಹರಿಕೃಷ್ಣ ಅವರು ಚಂದ್ರಬಾಬು ನಾಯ್ಡು ಅವರಿಗೆ ಸಂಬಂಧಿಕರಾಗಿದ್ದಾರೆ. ಅಲ್ಲದೆ, ರಾಜ್ಯಸಭೆಯ ಮಾಜಿ ಸದಸ್ಯರೂ ಆಗಿ ಸೇವೆ ಸಲ್ಲಿಸಿದ್ದರು. 
ಹರಿಕೃಷ್ಣ ಅವರ ಸಾವಿನ ಸುದ್ದಿ ಕೇಳುತ್ತಿದ್ದಂತೆಯೇ ಆಘಾತ ವ್ಯಕ್ತಪಡಿಸಿದ ಚಂದ್ರಬಾಬು ನಾಯ್ಡು ಅವರು, ಎಲ್ಲಾ ಕಾರ್ಯಕ್ರಮಗಳನ್ನು ರದ್ದುಗೊಳಿಸಿ ಆಸ್ಪತ್ರೆಗೆ ದೌಡಾಯಿಸಿದ್ದಾರೆಂದು ತಿಳಿದುಬಂದಿದೆ. 
ಈ ನಡುವೆ ಹರಿಕೃಷ್ಣ ಅವರ ಸಾವಿಗೆ ಆಂಧ್ರಪ್ರದೇಶದ ಹಲವು ಸಚಿವರು, ಅಧಿಕಾರಿಗಳು ಪಕ್ಷದ ಸದಸ್ಯರು, ಉಪ ರಾಷ್ಟ್ರಪತಿ ಎಂ. ವೆಂಕಯ್ಯ ನಾಯ್ಡು ಹಾಗೂ ಟಾಲಿವುಡ್ ನಟ-ನಟಿಯರು ತೀವ್ರ ಸಂತಾಪ ಸೂಚಿಸಿದ್ದಾರೆ. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com