ಮಧುರೈ: 2019ರ ಲೋಕಸಭೆ ಚುನಾವಣೆಯಲ್ಲಿ ಸ್ಪರ್ಧಿಸಲು ತಾವು ಸಿದ್ಧರಾಗುತ್ತಿರುವುದಾಗಿ ನಟ ಹಾಗೂ ಮಕ್ಕಳ್ ನೀತಿ ಮಯಂ ಮುಖ್ಯಸ್ಥ ಕಮಲ್ ಹಾಸನ್ ಹೇಳಿದ್ದಾರೆ.
ತಮಿಳುನಾಡಿನಲ್ಲಿ ಮುಂಬರುವ ಉಪಚುನಾವಣೆಯಲ್ಲಿ ಸ್ಪರ್ಧಿಸುವುದಿಲ್ಲ ಎಂಬುದನ್ನು ಹೇಳಿದ್ದಾರೆ. 2019ರ ಲೋಕಸಭೆ ಚುನಾವಣೆಗೆ ನಾವು ಸಿದ್ಧರಾಗುತ್ತಿದ್ದೇವೆ, ನಾವು ಈಗಾಗಲೇ ಸಿದ್ದರಿದ್ದೇವೆ ಎಂಬುದು ಸತ್ಯ ಎಂದು ಹೇಳಿದ್ದಾರೆ,
ಇನ್ನೂ ತಮಿಳುನಾಡಿನಲ್ಲಿ ಮುಂಬರುವ ವಿಧಾನಸಭೆ ಚುನಾವಣೆಯಲ್ಲಿ ತಮ್ಮ ಪಕ್ಷ ಸ್ಪರ್ಧಿಸುವುದಿಲ್ಲ ಎಂದು ಸ್ಪಷ್ಟಪಡಿಸಿದ ಅವರು, ಸರ್ಕಾರಕ್ಕೆ ಸೂಕ್ತ ಬುದ್ಧಿ ಕಲಿಸುತ್ತೇವೆ ಎಂದು ಹೇಳಿದ್ದಾರೆ.
ತಿರುವೂರ್ ಮತ್ತು ತಿರುಪರಂಕುಡ್ರಮ್ ವಿಧಾನಸಭೆ ಕ್ಷೇತ್ರಗಳಲ್ಲಿ ಉಪ ಚುನಾವಣೆ ನಡೆಯಲಿದೆ.