2014ರಲ್ಲಿ ಕರುಣಾನಿಧಿ ಅವರು ಡಿಎಂಕೆ ಅಧ್ಯಕ್ಷರಾಗಿದ್ದಾಗ ಅಳಗಿರಿಯನ್ನು ಪಕ್ಷದಿಂದ ಉಚ್ಚಾಟಿಸಲಾಗಿತ್ತು. ಕರುಣಾನಿಧಿ ನಿಧನದ ನಂತರ ಅವರ ಕಿರಿಯ ಪುತ್ರ ಸ್ಟಾಲಿನ್ ಡಿಎಂಕೆ ಅಧ್ಯಕ್ಷರಾಗಿ ಆಯ್ಕೆಯಾಗಿದ್ದು, ಅಳಗಿರಿ ಇತ್ತೀಚಿಗಷ್ಟೇ ನನ್ನನ್ನು ಮತ್ತೆ ಪಕ್ಷಕ್ಕೆ ಸೇರ್ಪಡೆಮಾಡಿಕೊಳ್ಳದಿದ್ದರೆ ಪರಿಣಾಮ ಎದುರಿಸಬೇಕಾದಿತು ಎಂದು ಎಚ್ಚರಿಕೆ ನೀಡಿದ್ದರು.