ಆದಿವಾಸಿಗಳಿಂದ ಜೀವ ಉಳಿಸಿಕೊಂಡು ಬಂದರೂ ಆತ ಅಲ್ಲಿಂದ ಮರಳಲಿಲ್ಲ. ಮರುದಿನವೇ ಮತ್ತೆ ಸೆಂಟಿನೆಲ್ ದ್ವೀಪಕ್ಕೆ ಹೋದ. ಅಲ್ಲಿ ಆದಿವಾಸಿಗಳ ಬಾಣದ ದಾಳಿಗೆ ಬಲಿಯಾದ ಎಂದು ಹೇಳಲಾಗುತ್ತಿದೆ. ಆದರೆ ಜಾನ್ ಸಾವಿನ ಕುರಿತು ಬಗೆಬಗೆಯ ವಾದಗಳು ಕೇಳಿಬರುತ್ತಿವೆ. ಅಂಡಮಾನ್- ನಿಕೋಬಾರ್ ದ್ವೀಪದ ಡಿಜಿಪಿ ಅವರ ಪ್ರಕಾರ, ಫುಟ್ಬಾಲ್, ಬಲೆ, ಕತ್ತರಿ, ಔಷಧ ಕಿಟ್ನಂತಹ ಉಡುಗೊರೆಗಳನ್ನು ಹಿಡಿದು ಸೆಂಟಿನೆಲ್ ದ್ವೀಪಕ್ಕೆ ಜಾನ್ ಹೋಗುತ್ತಿದ್ದಂತೆ ಬಾಣಗಳಿಂದ ಆತನ ಮೇಲೆ ದಾಳಿ ನಡೆಯಿತು. ಜೀವ ಇದ್ದಾಗಲೇ ಆತನನ್ನು ಆದಿವಾಸಿಗಳು ಎಳೆದೊಯ್ದರು. ಇನ್ನೂ ಕೆಲವು ವರದಿಗಳ ಪ್ರಕಾರ, ಕೊಲ್ಲುವ ಮುನ್ನ ಜಾನ್ನನ್ನು ಎರಡು ದಿನ ಆದಿವಾಸಿಗಳು ಒತ್ತೆ ಇಟ್ಟುಕೊಂಡಿದ್ದರು ಎಂದು ಹೇಳಲಾಗುತ್ತಿದೆ ಎಂದು ಮಾಹಿತಿ ನೀಡಿದ್ದಾರೆ.