ಇದೇ ವಿಚಾರಕ್ಕೆ ಸಂಬಂಧಿಸಿದಂತೆ ಮಾತನಾಡಿರುವ ಅಂಡಮಾನ್ ಅಧಿಕಾರಿಯೊಬ್ಬರು, ಹೊರ ಜಗತ್ತಿನ ಸಂಪರ್ಕಕ್ಕೆ ಬಾರದೇ ಪುಟ್ಟದ್ವೀಪದಲ್ಲಿ ಜೀವನ ಸಾಗಿಸುತ್ತಿರುವ ಆದಿವಾಸಿಗಳಿರುವ ಸ್ಥಳಕ್ಕೆ ಹೋಗಿ ಮತ ಪ್ರಚಾರಕ ಜಾನ್ ಅಲೆನ್ ಚಾವು ದೇಹ ತರಬೇಕು. ಆದರೆ ಅದೊಂದು ಸೂಕ್ಷ್ಮ ಪ್ರದೇಶವಾಗಿರುವುದರಿಂದ ಹಾಗೂ ಆ ದ್ವೀಪದ ಸುತ್ತಳತೆಯ 5 ಕಿ.ಮೀ. ಒಳಕ್ಕೆ ಯಾರೂ ಹೋಗಬಾರದು ಎಂಬ ನಿರ್ಬಂಧ ಇರುವುದರಿಂದ ಕಾರ್ಯಾಚರಣೆ ಅಷ್ಟುಸುಲಭವಿಲ್ಲ. ಹೋದರೂ ಆದಿವಾಸಿಗಳು ದಾಳಿ ಮಾಡುತ್ತಾರೆ. ವಿಳಂಬ ಮಾಡಿದರೆ, ತಮ್ಮದೇ ರೀತಿಯಲ್ಲಿ ಶವವನ್ನು ಅಂತ್ಯಸಂಸ್ಕಾರ ಮಾಡುತ್ತಾರೆ ಎಂದು ಹೇಳಿದ್ದಾರೆ.