ಮಂದಿರ ವಿವಾದ ಒಳ್ಳೆಯದ್ದಕ್ಕಿಂತಲೂ ಹೆಚ್ಚು ಹಾನಿಯನ್ನೇ ಮಾಡುತ್ತದೆ. ಬಿಜೆಪಿಗೆ ಸಂಬಂಧಿಸಿದ್ದ ವಿಚಾರವನ್ನು ಅಲ್ಪಸಂಖ್ಯಾತರ ಮತಗಳನ್ನು ಕಸಿಯಲು ವಿರೋಧ ಪಕ್ಷಗಳು ಬಳಸಿಕೊಳ್ಳುತ್ತಿವೆ. ವಿವಾದ ಸಂಬಂಧ ನ್ಯಾಯಾಲಯದ ತೀರ್ಪಿಗಾಗಿ ನಾವು ಕಾಯುತ್ತಿದ್ದೇವೆ. ವಿವಾದ ನ್ಯಾಯಾಲಯದ ಅಂಗಳದಲ್ಲಿದ್ದಾಗ ನಾವು ಆತುರ ಪಡಬಾರದು. ನಿರ್ಧಾರ ಕೈಗೊಳ್ಳಲು ನ್ಯಾಯಾಲಯಕ್ಕೆ ಸಮಯ ನೀಡಬೇಕು. ಆದರೆ, ಜನರ ನಿರೀಕ್ಷೆಗಳು ಹೆಚ್ಚಾಗುತ್ತಲೇ ಇದೆ. ಸುಗ್ರೀವಾಜ್ಞೆ ಬಗ್ಗೆ ಸರ್ಕಾರ ಶೀಘ್ರದಲ್ಲಿಯೇ ನಿರ್ಧಾರ ಕೈಗೊಳ್ಳಲಿದೆ. ಆಧರೆ, ಪ್ರಸ್ತುತವಂತೂ ಸರ್ಕಾರ ಈ ಬಗ್ಗೆ ಯಾವುದೇ ರೀತಿಯ ಚಿಂತನೆಗಳನ್ನೂ ನಡೆಸುತ್ತಿಲ್ಲ ಎಂದು ತಿಳಿಸಿದ್ದಾರೆ.