ಮೇಕೆದಾಟಿನಲ್ಲಿ ಅಣೆಕಟ್ಟು ಕಟ್ಟುವುದು ಸ್ವೀಕಾರಾರ್ಹವಲ್ಲ: ಕೇಂದ್ರ ಸಚಿವ

ಮೇಕೆದಾಟಿನಲ್ಲಿ ಕರ್ನಾಟಕ ರಾಜ್ಯ ಅಣೆಕಟ್ಟು ನಿರ್ಮಾಣ ಮಾಡುವುದು ಸ್ವೀಕಾರ್ಹವಲ್ಲ. ಅಂತಹ ಅಣೆಕಟ್ಟು ಕಟ್ಟುವಂತಹ ಪರಿಸ್ಥಿತಿ ಉದ್ಭವಿಸುವುದೂ ಇಲ್ಲ ಎಂದು ತಮಿಳುನಾಡಿನ ಕನ್ಯಾಕುಮಾರಿಯ ಬಿಜೆಪಿ ಸಂಸದ ಹಾಗೂ ಕೇಂದ್ರ ಸಚಿವ...
ಕೇಂದ್ರ ಸಚಿವ ಪೊನ್ ರಾಧಾಕೃಷ್ಣನ್
ಕೇಂದ್ರ ಸಚಿವ ಪೊನ್ ರಾಧಾಕೃಷ್ಣನ್
ಕೊಯಮತ್ತೂರು: ಮೇಕೆದಾಟಿನಲ್ಲಿ ಕರ್ನಾಟಕ ರಾಜ್ಯ ಅಣೆಕಟ್ಟು ನಿರ್ಮಾಣ ಮಾಡುವುದು ಸ್ವೀಕಾರ್ಹವಲ್ಲ. ಅಂತಹ ಅಣೆಕಟ್ಟು ಕಟ್ಟುವಂತಹ ಪರಿಸ್ಥಿತಿ ಉದ್ಭವಿಸುವುದೂ ಇಲ್ಲ ಎಂದು ತಮಿಳುನಾಡಿನ ಕನ್ಯಾಕುಮಾರಿಯ ಬಿಜೆಪಿ ಸಂಸದ ಹಾಗೂ ಕೇಂದ್ರ ಸಚಿವ ಪೊನ್ ರಾಧಾಕೃಷ್ಣನ್ ಅವರು ಶನಿವಾರ ಹೇಳಿದ್ದಾರೆ. 
ಈ ಕುರಿತಂತೆ ಮಾಧ್ಯಮಗಳೊಂದಿಗೆ ಮಾತನಾಡಿರುವ ಅವರು, ಕರ್ನಾಟಕ ಕಾವೇರಿ ನದಿಗೆ ಅಡ್ಡಲಾಗಿ ಮೇಕೆದಾಟು ಬಳಿ ಕಟ್ಟಲು ಉದ್ದೇಶಿಸಿರುವ ಕುಡಿಯುವ ನೀರಿನ ಉದ್ದೇಶದ ಅಣೆಗಟ್ಟೆಗೆ ವಿರೋಧ ವ್ಯಕ್ತಪಡಿಸಿದ್ದಾರೆ. 
ಅಣೆಕಟ್ಟು ಕಟ್ಟುವುದು ಸ್ವೀಕಾರ್ಹವಲ್ಲ. ಅಂತಹ ಪರಿಸ್ಥಿತಿ ಉದ್ಭವಿಸುವುದೂ ಇಲ್ಲ ಎಂದು ತಿಳಿಸಿದ್ದಾರೆ. 
ಇತ್ತೀಚೆಗಷ್ಟೇ ಕೇಂದ್ರ ಜಲ ಆಯೋಗವು ಮೇಕೆದಾಟು ಯೋಜನೆಯ ಕಾರ್ಯಸಾಧು ವರದಿಗೆ ಅಸ್ತು ಎಂದಿತ್ತು. ಇದು ತಮಿಳುನಾಡಿನ ವಿರೋಧಕ್ಕೆ ಕಾರಣವಾಗಿದೆ. 

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com