ಅಖ್ನೂರ್ ಸೆಕ್ಟರ್'ನಲ್ಲಿ ಗಣಿ ಸ್ಫೋಟ: 2 ಯೋಧರ ಸಾವು, ಇಬ್ಬರಿಗೆ ಗಾಯ

ಜಮ್ಮು ಮತ್ತು ಕಾಶ್ಮೀರದ ಅಖ್ನೂರ್ ಸೆಕ್ಟರ್ ಬಳಿ ಗಣಿ ಸ್ಫೋಟಗೊಂಡ ಪರಿಣಾಮ ಇಬ್ಬರು ಯೋಧರು ಸಾವನ್ನಪ್ಪಿ, ಮತ್ತಿಬ್ಬರಿಗೆ ಗಾಯವಾಗಿರುವ ಘಟನೆ ಶನಿವಾರ ನಡೆದಿದೆ...
ಸಂಗ್ರಹ ಚಿತ್ರ
ಸಂಗ್ರಹ ಚಿತ್ರ
ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ ಅಖ್ನೂರ್ ಸೆಕ್ಟರ್ ಬಳಿ ಗಣಿ ಸ್ಫೋಟಗೊಂಡ ಪರಿಣಾಮ ಇಬ್ಬರು ಯೋಧರು ಸಾವನ್ನಪ್ಪಿ, ಮತ್ತಿಬ್ಬರಿಗೆ ಗಾಯವಾಗಿರುವ ಘಟನೆ ಶನಿವಾರ ನಡೆದಿದೆ. 
ಅಖ್ನೂರ್ ಸೆಕ್ಟರ್ ಬಳಿಯಿರುವ ಪಲ್ಲನ್ವಾಲಾದ ಗಡಿ ನಿಯಂತ್ರಣ ರೇಳೆ ಬಳಿ ಗಣಿ ಸ್ಫೋಟಗೊಂಡಿದ್ದು, ಈ ವೇಳೆ ನಾಲ್ವರು ಯೋಧರಿಗೆ ಗಂಭೀರವಾಗಿ ಗಾಯವಾಗಿತ್ತು. ಕೂಡಲೇ ಗಾಯಗೊಂಡಿದ್ದ ಯೋಧರನ್ನು ಸ್ಥಳೀಯ ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು. ಇದೀಗ ಚಿಕಿತ್ಸೆ ಫಲಕಾರಿಯಾಗದೆ ಇಬ್ಬರು ಯೋಧರು ಸಾವನ್ನಪ್ಪಿದ್ದಾರೆ. ಮತ್ತಿಬ್ಬರ ಸ್ಥಿತಿ ಚಿಂತಾಜನರವಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. 
ಘಟನೆ ಬಳಿಕ ಸೇನಾಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿದ್ದು, ಪರಿಶೀಲನೆ ನಡೆಸಿದ್ದಾರೆ. ಇದೊಂದು ಅಚಾನಕ್ ಆಗಿರುವ ಸ್ಫೋಟವಾಗಿದೆ. ಪ್ರಕರಣ ಸಂಬಂಧ ತನಿಖೆ ಪ್ರಗತಿಯಲ್ಲಿದೆ. ಮೃತಪಟ್ಟಿಸುವ ಯೋಧರನ್ನು ಸುರ್ಜೀತ್ ಸಿಂಗ್ ಹಾಗೂ ಸೂರಜ್ ಸಿಂಗ್ ಭಕುನ್ ಎಂದು ಗುರ್ತಿಸಲಾಗಿದೆ. 

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com