ತೆಲಂಗಾಣ ವಿಧಾನಸಭಾ ಚುನಾವಣೆಯ ಪ್ರಚಾರದ ನಿಮಿತ್ತ ಇಂದು ವಿಕಾರಾಬಾದ್ ಜಿಲ್ಲೆಯ ತಂದೂರ್ ನಗರದಲ್ಲಿ ಏರ್ಪಡಿಸಲಾಗಿದ್ದ ಪ್ರಚಾರದಲ್ಲಿ ಪಾಲ್ಗೊಂಡು ಮಾತನಾಡಿದ ಯೋಗಿ ಆದಿತ್ಯನಾಥ್, 'ಉಗ್ರಗಾಮಿ ಹಾಗೂ ಐಸಿಸ್ ಸಂಘಟನೆಗಳೊಂದಿಗೆ ಸಂಬಂಧಗಳನ್ನು ಹೊಂದಿರುವ ಸಂಘಟನೆಗಳ ಕೈಯಲ್ಲಿ ದೇಶದ ರಕ್ಷಣೆ ಸಾಧ್ಯವೇ? ದೇಶದ ಕುರಿತು ಬದ್ಧತೆ ಹೊಂದಿರುವ ಯುವಕರ ಸಂಘಟನೆಯಿಂದ ದೇಶ ನಡೆಯಬೇಕೇ ಅಥವಾ ಕಾಂಗ್ರೆಸ್ ನಂತಹ ಪಕ್ಷ ನಾಯಕರ ಮುಂದಾಳತ್ವದಲ್ಲಿ ದೇಶ ನಡೆಯಬೇಕೇ ಎನ್ನುವುದನ್ನು ನೀವೇ ನಿರ್ಧಾರ ಮಾಡಿ ಎಂದರು. ಅಲ್ಲದೇ ತೆಲುಗು ದೇಶಂ ಪಕ್ಷ (ಟಿಡಿಪಿ) ಹಾಗೂ ತೆಲಂಗಾಣ ರಾಷ್ಟ್ರ ಸಮಿತಿ (ಟಿಆರ್ಎಸ್) ಪಕ್ಷಗಳು ನಕ್ಸಲ್ ಹಾಗೂ ಭಯೋತ್ಪಾದನೆಗೆ ಬೆಂಬಲ ನೀಡುತ್ತಿದೆ ಎಂದು ಆರೋಪಿಸಿದರು.