ಸುಭೋಧ್ ಕುಮಾರ್ ಅವರ ಹತ್ಯೆ ಪ್ರಕರಣ ಸಂಬಂಧ ಈಗಾಗಲೇ ಎಫ್ಐಆರ್ ದಾಖಲಿಸಿಕೊಳ್ಳಲಾಗಿದೆ. 4 ಆರೋಪಿಗಳನ್ನು ಈಗಾಗಲೇ ಬಂಧನಕ್ಕೊಳಪಡಿಸಲಾಗಿದ್ದು, ಮತ್ತಷ್ಟು ಜನರನ್ನು ಶೀಘ್ರದಲ್ಲಿಯೇ ಬಂಧನಕ್ಕೊಳಪಡಿಸಲಾಗುತ್ತದೆ. ಈಗಾಗಲೇ ಸರ್ಕಾರ ಮೃತಪಟ್ಟಿರುವ ಪೊಲೀಸ್ ಅಧಿಕಾರಿಗೆ ರೂ.50 ಲಕ್ಷ ಪರಿಹಾರ ಘೋಷಣೆ ಮಾಡಿದೆ. ಇಲ್ಲದೆ, ಅಧಿಕಾರಿಯ ಪತ್ನಿಗೆ ಪಿಂಚಣಿ ನೀಡುವುದಾಗಿಯೂ ತಿಳಿಸಿದೆ. ಅಧಿಕಾರಿಯ ಕುಟುಂಬಸ್ಥರೊಬ್ಬರಿಗೆ ಸರ್ಕಾರಿ ಉದ್ಯೋಗ ಕೊಡುವುದಾಗಿ ಭರವಸೆ ನೀಡಿದೆ ಎಂದು ತಿಳಿಸಿದ್ದಾರೆ.