1064 ರೂ.ಗಳಿಗೆ ಇನ್ನೂ 54 ರೂ.ಗಳನ್ನು ಸೇರಿಸಿ ಪ್ರಧಾನಿ ಪರಿಹಾರ ನಿಧಿಗೆ ರವಾನಿಸಿದ್ದಾರೆ. ಈ ಕುರಿತು ಮಾತನಾಡಿರುವ ಅವರು, 'ನಾಲ್ಕು ತಿಂಗಳಿಂದ ಬೆಳೆದ ಉತ್ತಮ ಫಸಲಿಗೆ ಉತ್ತಮ ಬೆಲೆ ಸಿಗದಾದಾಗ ಬಹಳ ನೋವಾಯಿತು. ಹಾಗಾಗಿ ಹಣವನ್ನು ಪ್ರಧಾನಿಗೆ ದಾನ ಮಾಡಲು ನಾನು ನಿರ್ಧರಿಸಿದೆ. ಮನಿ ಆರ್ಡರ್ ಹಣವನ್ನೂ ಹಾಕಿ ಪ್ರಧಾನಿ ಪರಿಹಾರ ನಿಧಿಗೆ ರವಾನಿಸಿದೆ. ನಾನು ಯಾವ ಪಕ್ಷದವನೂ ಅಲ್ಲ. ಆದರೆ, ರೈತರ ಸಮಸ್ಯೆಗಳ ಬಗೆಗೆ ಮೋದಿ ಅವರ ನಿರ್ಲಕ್ಷ್ಯವನ್ನು ಖಂಡಿಸಲು ನಾನು ಹೀಗೆ ಮಾಡಿದೆ' ಎಂದು ಅವರು ಬೇಸರ ವ್ಯಕ್ತಪಡಿಸಿದ್ದಾರೆ.