ಅಮಿತ್ ಶಾ ರಥ ಯಾತ್ರೆಗೆ ಅನುಮತಿ ನಿರಾಕರಿಸಿದ ಕೋಲ್ಕತಾ ಹೈಕೋರ್ಟ್, ವಿಭಾಗೀಯ ಪೀಠಕ್ಕೆ ಬಿಜೆಪಿ ಮೊರೆ

ಬಿಜೆಪಿ ಅಧ್ಯಕ್ಷ ಅಮಿತ್ ಶಾ ಅವರ ಉದ್ದೇಶಿತ ರಥ ಯಾತ್ರೆಗೆ ಅನುಮತಿ ನೀಡಲು ನಿರಾಕರಿಸಿದ್ದ ಪಶ್ಚಿಮ ಬಂಗಾಳ ಸರ್ಕಾರದ ನಿರ್ಧಾರವನ್ನು ಕೋಲ್ಕತಾ ಹೈಕೋರ್ಟ್ ಗುರುವಾರ ಎತ್ತಿ ಹಿಡಿದಿದೆ.
ಅಮಿತ್ ಶಾ
ಅಮಿತ್ ಶಾ
ಕೋಲ್ಕತಾ: ಬಿಜೆಪಿ ಅಧ್ಯಕ್ಷ ಅಮಿತ್ ಶಾ ಅವರ ಉದ್ದೇಶಿತ ರಥ ಯಾತ್ರೆಗೆ ಅನುಮತಿ ನೀಡಲು ನಿರಾಕರಿಸಿದ್ದ ಪಶ್ಚಿಮ ಬಂಗಾಳ ಸರ್ಕಾರದ ನಿರ್ಧಾರವನ್ನು ಕೋಲ್ಕತಾ ಹೈಕೋರ್ಟ್ ಗುರುವಾರ ಎತ್ತಿ ಹಿಡಿದಿದೆ.
ಮಮತಾ ಬ್ಯಾನರ್ಜಿ ಸರ್ಕಾರದ ನಿರ್ಧಾರ ಪ್ರಶ್ನಿಸಿ ಬಿಜೆಪಿ ಸಲ್ಲಿಸಿದ್ದ ಅರ್ಜಿಯ ವಿಚಾರಣೆ ನಡೆಸಿದ ಕೋರ್ಟ್, ರಥ ಯಾತ್ರೆಗೆ ಅನುಮತಿ ನೀಡಲು ನಿರಾಕರಿಸಿದೆ.
ರಾಜ್ಯ ಸರ್ಕಾರದ ಪರ ವಾದ ಮಂಡಿಸಿದ ಅಡ್ವೋಕೇಟ್ ಜನರಲ್ ಕಿಶೋರ್ ದತ್ತಾ ಅವರು, ಕೋಮುಗಲಭೆ ಭೀತಿ ಹಿನ್ನೆಲೆಯಲ್ಲಿ ನಾಳೆಯಿಂದ ಆರಂಭವಾಗಬೇಕಿದ್ದ ಬಿಜೆಪಿ ಅಧ್ಯಕ್ಷರ ರಥಯಾತ್ರೆಗೆ ಅನುಮತಿ ನೀಡಲು ಕೂಚ್ ಬೆಹರ್ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ನಿರಾಕರಿಸಿದ್ದಾರೆ ಎಂದು ಕೋರ್ಟ್ ಗೆ ಮಾಹಿತಿ ನೀಡಿದರ.
ರಥ ಯಾತ್ರೆಯಿಂದ ಕೋಮುಗಲಭೆ ಸೃಷ್ಟಿಯಾಗುವ ಸಾಧ್ಯತೆ ಇದೆ. ಹೀಗಾಗಿ ಅನುಮತಿ ನಿರಾಕರಿಸಲಾಗಿದೆ ಎಂದು ಸರ್ಕಾರದ ಕ್ರಮವನ್ನು ದತ್ತಾ ಸಮರ್ಥಿಸಿಕೊಂಡರು. ಆದರೆ ಇದಕ್ಕೆ ಬಿಜೆಪಿ ಪರ ವಕೀಲರು ತೀವ್ರ ವಿರೋಧ ವ್ಯಕ್ತಪಡಿಸಿದರು. ಈ ವೇಳೆ ಮಧ್ಯ ಪ್ರವೇಶಿಸಿದ ನ್ಯಾಯಾಧೀಶರು, ಅಹಿತಕರ ಘಟನೆ ನಡೆದರೆ ಯಾರು ಜಾವಾಬ್ದಾರರು ಎಂದು ಬಿಜೆಪಿ ಪರ ವಕೀಲ ಅನಿದ್ಯಾ ಮಿತ್ರಾ ಅವರಿಗೆ ಪ್ರಶ್ನಿಸಿದರು. ಕಾನೂನು ಸುವ್ಯವಸ್ಥೆ ಕಾಪಾಡುವುದು ರಾಜ್ಯ ಸರ್ಕಾರದ ಜವಾಬ್ದಾರಿ ಎಂದು ಮಿತ್ರ ಉತ್ತರಿಸಿದರು.
ವಾದ - ಪ್ರತಿವಾದ ಆಲಿಸಿದ ಹೈಕೋರ್ಟ್ ಏಕ ಸದಸ್ಯ ಪೀಠ, ರಥ ಯಾತ್ರೆಗೆ ಅನುಮತಿ ನೀಡಲು ನಿರಾಕರಿಸಿದೆ. ಆದರೆ ಬಿಜೆಪಿ ಏಕ ಸದಸ್ಯ ಪೀಠದ ತೀರ್ಪು ಪ್ರಶ್ನಿಸಿ ವಿಭಾಗೀಯ ಪೀಠದ ಮೊರೆ ಹೋಗಲು ನಿರ್ಧರಿಸಿದೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com