ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ

ಕದನ ವಿರಾಮ ಉಲ್ಲಂಘಿಸಿದ ಪಾಕ್, ಓರ್ವ ಭಾರತೀಯ ಯೋಧ ಹುತಾತ್ಮ

ಪಾಕಿಸ್ತಾನ ಸೇನೆ ಗುರುವಾರ ಕದನ ವಿರಾಮ ಉಲ್ಲಂಘಿಸಿ, ಭಾರತೀಯ ಯೋಧರ ಮೇಲೆ ಅಪ್ರಚೋದಿತ
ಶ್ರೀನಗರ: ಪಾಕಿಸ್ತಾನ ಸೇನೆ ಗುರುವಾರ ಕದನ ವಿರಾಮ ಉಲ್ಲಂಘಿಸಿ, ಭಾರತೀಯ ಯೋಧರ ಮೇಲೆ ಅಪ್ರಚೋದಿತ ಗುಂಡಿನ ದಾಳಿ ನಡೆಸಿದ್ದು, ದಾಳಿಯಲ್ಲಿ ಓರ್ವ ಯೋಧ ಹುತಾತ್ಮರಾಗಿದ್ದಾರೆ.
ಇಂದು ಬೆಳಗ್ಗೆ 10.45ರ ಸುಮಾರಿಗೆ ಜಮ್ಮು ಮತ್ತು ಕಾಶ್ಮೀರದ ಕುಪ್ವಾರ ಜಿಲ್ಲೆಯ ಗಡಿ ನಿಯಂತ್ರಣ ರೇಖೆ(ಎಲ್ಒಸಿ)ಯ ಮಚಿಲ್ ಸೆಕ್ಟರ್ ಬಳಿ ಪಾಕ್ ಕದನ ವಿರಾಮ ಉಲ್ಲಂಘಿಸಿದೆ ಎಂದು ರಕ್ಷಣಾ ವಕ್ತಾರ ಕರ್ನಲ್ ರಾಜೇಶ್ ಕಲಿಯಾ ಅವರು ತಿಳಿಸಿದ್ದಾರೆ.
ಪಾಕ್ ಸೈನಿಕರು ನಡೆಸಿದ ಅಪ್ರಚೋದಿನ ಗುಂಡಿನ ದಾಳಿಯಲ್ಲಿ ಭಾರತೀಯ ಯೋಧರೊಬ್ಬರು ಹುತಾತ್ಮರಾಗಿದ್ದಾರೆ ಮತ್ತು ನಾಗರಿಕರ ಮನೆಯೊಂದು ಹಾನಿಯಾಗಿದೆ ಎಂದು ಅವರು ಹೇಳಿದ್ದಾರೆ.
ಪಾಕ್ ಅಪ್ರಚೋದಿತ ಗುಂಡಿನ ದಾಳಿ ಭಾರತ ತಕ್ಕ ಪ್ರತ್ಯುತ್ತರ ನೀಡುತ್ತಿದೆ ಎಂದು ಕಲಿಯಾ ಅವರು ತಿಳಿಸಿದ್ದಾರೆ.
ನಿನ್ನೆ ಬರಾಮುಲ್ಲಾ ಜಿಲ್ಲೆಯ ಉರಿ ಸೆಕ್ಟರ್ ನಲ್ಲಿ ಪಾಕ್ ನಡೆಸಿದ ಗುಂಡಿನ ದಾಳಿಯಲ್ಲಿ ಇಬ್ಬರು ಭಾರತೀಯ ಯೋಧರು ಗಾಯಗೊಂಡಿದ್ದರು.

Related Stories

No stories found.

Advertisement

X
Kannada Prabha
www.kannadaprabha.com