ಉತ್ತರ ಪ್ರದೇಶ: ದಲಿತ ಹೇಳಿಕೆ ಬೆನ್ನಲ್ಲೇ ಹನುಮಂತನ ಜಾತಿ ಪ್ರಮಾಣ ಪತ್ರಕ್ಕಾಗಿ ಅರ್ಜಿ ಸಲ್ಲಿಕೆ!

ಉತ್ತರ ಪ್ರದೇಶ ಸಿಎಂ ಯೋಗಿ ಆದಿತ್ಯನಾಥ್, ರಾಮಾಯಣದ ಹನುಮಂತ ದಲಿತನಾಗಿದ್ದ ಎಂದು ಹೇಳಿದ್ದೇ ತಡ, ಹನುಮಂತನ ಜಾತಿಯ ಬಗ್ಗೆ ಇನ್ನೂ ಚರ್ಚೆ ನಡೆಯುತ್ತಲೇ ಇದೆ.
ಉತ್ತರ ಪ್ರದೇಶ:  ದಲಿತ ಹೇಳಿಕೆ ಬೆನ್ನಲ್ಲೇ ಹನುಮಂತನ ಜಾತಿ ಪ್ರಮಾಣ ಪತ್ರಕ್ಕಾಗಿ ಅರ್ಜಿ ಸಲ್ಲಿಕೆ!
ಉತ್ತರ ಪ್ರದೇಶ: ದಲಿತ ಹೇಳಿಕೆ ಬೆನ್ನಲ್ಲೇ ಹನುಮಂತನ ಜಾತಿ ಪ್ರಮಾಣ ಪತ್ರಕ್ಕಾಗಿ ಅರ್ಜಿ ಸಲ್ಲಿಕೆ!
Updated on
ವಾರಾಣಸಿ: ಉತ್ತರ ಪ್ರದೇಶ ಸಿಎಂ ಯೋಗಿ ಆದಿತ್ಯನಾಥ್, ರಾಮಾಯಣದ ಹನುಮಂತ ದಲಿತನಾಗಿದ್ದ ಎಂದು ಹೇಳಿದ್ದೇ ತಡ, ಹನುಮಂತನ ಜಾತಿಯ ಬಗ್ಗೆ ಇನ್ನೂ ಚರ್ಚೆ ನಡೆಯುತ್ತಲೇ ಇದೆ. ಈ ಬೆನ್ನಲ್ಲೇ ಉತ್ತರ ಪ್ರದೇಶದಲ್ಲಿ ಹನುಮಂತನ ಜಾತಿ ಪ್ರಮಾಣಪತ್ರಕ್ಕಾಗಿ ಅರ್ಜಿ ಸಲ್ಲಿಸಲಾಗಿದೆ. 
ಶಿವಪಾಲ್ ಯಾದವ್ ಅವರ ಪ್ರಗತಿಶೀಲ್ ಸಮಾಜವಾದಿ ಪಕ್ಷ (ಲೋಹಿಯಾ) ಪಕ್ಷ ಜಿಲ್ಲಾಡಳಿತಕ್ಕೆ ಹನುಮಂತನ ಜಾತಿಯ ಪ್ರಮಾಣಪತ್ರ ನೀಡುವಂತೆ ಅರ್ಜಿ ಸಲ್ಲಿಸಿದ್ದು, ಒಂದು ವೇಳೆ ಒಂದು ವಾರದಲ್ಲಿ ಜಿಲ್ಲಾಡಳಿತ ಪ್ರಮಾಣಪತ್ರ ನೀಡಲು ವಿಫಲವಾದರೆ ಧರಣಿ ಕೂರುವುದಾಗಿ ಎಚ್ಚರಿಕೆ ನೀಡಿದ್ದಾರೆ. 
ಉತ್ತರ ಪ್ರದೇಶ ಸಿಎಂ ಯೋಗಿ ಆದಿತ್ಯನಾಥ್ ಇತ್ತೀಚೆಗಷ್ಟೇ ಹನುನಂತನನ್ನು ದಲಿತ ಎಂದು ಹೇಳಿದ್ದರು. ನಾವು ಭಗವಾನ್ ಹನುನಂತನ ಜಾತಿ ಪ್ರಮಾಣಪತ್ರಕ್ಕಾಗಿ ವಾರಾಣಸಿ ಜಿಲ್ಲಾ ಮ್ಯಾಜಿಸ್ಟ್ರೇಟ್ ನಲ್ಲಿ ಅರ್ಜಿ ಸಲ್ಲಿಸಲಾಗಿದೆ. ಮುಖ್ಯಮಂತ್ರಿಗಳು ಭಗವಾನ್ ನ್ನು ಕ್ಷುಲ್ಲಕ ಜಾತಿ ರಾಜಕಾರಣಕ್ಕೆ ಎಳೆದು ತಂದಿದ್ದಾರೆ. ಆದ್ದರಿಂದ ಜಾತಿ ಪ್ರಮಾಣಪತ್ರಕ್ಕೆ ಅರ್ಜಿ ಸಲ್ಲಿಸಿದ್ದೇವೆ ಎಂದು ಪಿಎಸ್ ಪಿಎಲ್ ಯುವಮೋರ್ಚಾದ ಜಿಲ್ಲಾಅಧ್ಯಕ್ಷ ಹರೀಶ್ ಮಿಶ್ರಾ ಹೇಳಿದ್ದಾರೆ.
ಹನುಮಂತನ ಫೋಟೊ ಹಾಗೂ ಆತನ ತಂದೆ ಮಹಾರಾಜ್ ಕೇಸರಿ ಹಾಗೂ ತಾಯಿ ಅಂಜನಾ ದೇವಿ ಎಂಬ ಮಾಹಿತಿ ನೀಡಲಾಗಿದ್ದು, ಸಂಕಟ್ ಮೋಚನ ದೇವಾಲಯ ಆತನ ನಿವಾಸವೆಂದು ಅರ್ಜಿಯಲ್ಲಿ ನಮೂದಿಸಲಾಗಿದೆ. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com