ಹುಲಿ ಹತ್ಯೆ ಕುರಿತ ತನ್ನ ವಿಸ್ಮೃತ ವರದಿ ಸಲ್ಲಿಕೆ ಮಾಡಿರುವ ಎನ್ ಟಿಸಿಎ, 'ಅವನಿ' ಹುಲಿಗೆ ಅತ್ಯಂತ ತರಾತುರಿಯಲ್ಲಿ ಗುಂಡು ಹಾರಿಸಲಾಗಿದೆ. ಆ ಹುಲಿಯನ್ನು ಸೆರೆಹಿಡಿಯುವ ಕಾರ್ಯಾಚರಣೆಯಲ್ಲಿ ಸಾಮಾನ್ಯ ಕಾರ್ಯನಿರ್ವಹಣಾ ಪ್ರಕ್ರಿಯೆಗಳನ್ನು ಉಲ್ಲಂಘಿಸಲಾಗಿದೆ ಎಂದು ಹೇಳಿದೆ. ಅವನಿ ಹುಲಿ ಹತ್ಯೆ ಪ್ರಕರಣದ ತನಿಖೆಗೆ ರಚಿಸಲಾಗಿದ್ದ ತಜ್ಞರ ತಂಡವು ನೀಡಿರುವ ವರದಿಯಲ್ಲಿ ಈ ಮಾಹಿತಿ ಇದ್ದು, 'ಹುಲಿಯ ದೇಹ ಬಿದ್ದಿದ್ದ ಜಾಗ, ಅರಿವಳಿಕೆ ಚುಚ್ಚುಮದ್ದು ನಾಟಿಕೊಂಡಿದ್ದ ಭಾಗ ಮತ್ತು ಕೊನೆಯ ಕ್ಷಣಗಳಲ್ಲಿ ಹುಲಿಯ ಚಲನೆಯ ದಿಕ್ಕಿನ ವಿವರಗಳನ್ನು ಆಧಾರವಾಗಿಟ್ಟುಕೊಂಡು ಕಾರ್ಯಾಚರಣೆಯನ್ನು ಮರುಸೃಷ್ಟಿಸಲಾಯಿತು' ಎಂದು ವರದಿ ಹೇಳಿದೆ.