ಬಳಿಕ ಬುಲಂದರ್ ಶೆಹರ್ ಹಿಂಸಾಚಾರ ಕುರಿತಂತೆ ಬಿಜೆಪಿ ವಿರುದ್ಧ ಕಿಡಿಕಾರಿದ ಅವರು, ಪೊಲೀಸ್ ಅಧಿಕಾರಿಗೆ ತಲೆಗೆ ಗುಂಡು ಬಿದ್ದು ಸಾವನ್ನಪ್ಪಿದ್ದಾರೆ. ಪ್ರಕರಣದಲ್ಲಿ ಬಿಜೆಪಿ ನಾಯಕರ ಹೆಸರೂ ಕೂಡ ಕೇಳಿಬಂದಿದೆ. ಆದರೂ, ಸರ್ಕಾರ ತಲೆಕೆಡಿಸಿಕೊಳ್ಳುತ್ತಿಲ್ಲ. ಇದೀಗ ಜನರ ತಲೆ ಕಡಿದವರಿಗೆ ಇನಾಮು ಘೋಷಣೆ ಮಾಡಲಾಗುತ್ತಿದೆ. ಈ ಎಲ್ಲಾ ಬೆಳವಣಿಗೆಗಳನ್ನು ನೋಡಿದರೆ, ದೇಶದಲ್ಲಿ ತಾಲಿಬಾನ್ ವ್ಯವಸ್ಥೆ ನಡೆಯುತ್ತಿದೆಯೇ ಎಂಬ ಪ್ರಶ್ನೆ ಮೂಡುತ್ತದೆ.