ಮಹಾರಾಷ್ಟ್ರ: ಕೇಂದ್ರ ಸಚಿವ ರಾಮ್ ದಾಸ್ ಅಠಾವಳೆ ಮೇಲೆ ಯುವಕನಿಂದ ಹಲ್ಲೆ!

ಕೇಂದ್ರ ಸಾಮಾಜಿಕ ನ್ಯಾಯ ಮತ್ತು ಬಲವರ್ದನೆ ಸಚಿವ ರಾಮ್ ದಾಸ್ ಅಠಾವಳೆ ಮೇಲೆ ಹಲ್ಲೆ ನಡೆಸಲಾಗಿದೆ. ಅಂಬರ್ ನಾಥ್ ನಲ್ಲಿ ಈ ಘಟನೆ ನಡೆದಿದ್ದು, ಯುವಕನೋರ್ವ ರಿಪಬ್ಲಿಕ್ ಪಾರ್ಟಿ ಆಫ್ ಇಂಡಿಯಾ ರಾಷ್ಟ್ರೀಯ ಅಧ್ಯಕ್ಷರ ಮೇಲೆ ಹಲ್ಲೆ ನಡೆಸಿದ್ದಾನೆ.
ಯುವಕನಿಗೆ ಥಳಿಸುತ್ತಿರುವ ಗುಂಪು
ಯುವಕನಿಗೆ ಥಳಿಸುತ್ತಿರುವ ಗುಂಪು

ಮುಂಬೈ: ಕೇಂದ್ರ ಸಾಮಾಜಿಕ ನ್ಯಾಯ ಮತ್ತು ಬಲವರ್ದನೆ ಸಚಿವ ರಾಮ್ ದಾಸ್ ಅಠಾವಳೆ ಮೇಲೆ ಹಲ್ಲೆ ನಡೆಸಲಾಗಿದೆ. ಅಂಬರ್ ನಾಥ್ ನಲ್ಲಿ  ಈ ಘಟನೆ ನಡೆದಿದ್ದು, ಯುವಕನೋರ್ವ ರಿಪಬ್ಲಿಕ್ ಪಾರ್ಟಿ ಆಫ್ ಇಂಡಿಯಾ ರಾಷ್ಟ್ರೀಯ ಅಧ್ಯಕ್ಷರ ಮೇಲೆ ಹಲ್ಲೆ ನಡೆಸಿದ್ದಾನೆ.

ಸಂವಿಧಾನ ಸಮರ್ಪಣಾ ದಿನದ ಅಂಗವಾಗಿ ರಿಪಬ್ಲಿಕ್ ಪಾರ್ಟಿ ಆಫ್ ಇಂಡಿಯಾ ಪಕ್ಷದಿಂದ ಕಾರ್ಯಕ್ರಮ ಆಯೋಜಿಸಲಾಗಿತ್ತು. ಈ ಕಾರ್ಯಕ್ರಮ ಮುಗಿಸಿ ಹೊರಗೆ ಬಂದ  ರಾಮ್ ದಾಸ್ ಅಠಾವಳೆ ಮೇಲೆ ಗೊಸಾವಿ ಎಂಬ ಯುವಕ ಹಲ್ಲೆ ನಡೆಸಿದ್ದಾನೆ.
ತಕ್ಷಣ ಆತನನ್ನು ಹಿಡಿದ ಗುಂಪು ಹಿಗ್ಗಾಮುಗ್ಗಾ ಥಳಿಸಿದೆ. ಆತ ಕೆಳಗೆ ಬಿದ್ದರೂ ಬಿಟ್ಟರೂ ಬಿಟ್ಟಿಲ್ಲ, ಮನಸೋ ಇಚ್ಚೆ ಹಲ್ಲೆ ನಡೆಸಲಾಗಿದೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com