ರೈತರ ಸಮಸ್ಯೆಗಳನ್ನು ಪರಿಹರಿಸಲು ರಾಮ ಸ್ವರ್ಗದಿಂದ ಇಳಿಯುತ್ತಾನಾ?: ಕೇಂದ್ರಕ್ಕೆ ಫಾರೂಕ್ ಅಬ್ದುಲ್ಲಾ ಪ್ರಶ್ನೆ

ಕೇಂದ್ರ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿರುವ ಜಮ್ಮು-ಕಾಶ್ಮೀರದ ಮಾಜಿ ಸಿಎಂ ಫಾರೂಕ್ ಅಬ್ದುಲ್ಲಾ, ರೈತರ ಸಮಸ್ಯೆಗಳನ್ನು ಪರಿಹರಿಸಲು ರಾಮ ಸ್ವರ್ಗದಿಂದ ಇಳಿಯುತ್ತಾನಾ? ಎಂದು ಪ್ರಶ್ನಿಸಿದ್ದಾರೆ.
ರೈತರ ಸಮಸ್ಯೆಗಳನ್ನು ಪರಿಹರಿಸಲು ರಾಮ ಸ್ವರ್ಗದಿಂದ ಇಳಿಯುತ್ತಾನಾ?: ಕೇಂದ್ರಕ್ಕೆ ಫಾರೂಕ್ ಅಬ್ದುಲ್ಲಾ ಪ್ರಶ್ನೆ
ರೈತರ ಸಮಸ್ಯೆಗಳನ್ನು ಪರಿಹರಿಸಲು ರಾಮ ಸ್ವರ್ಗದಿಂದ ಇಳಿಯುತ್ತಾನಾ?: ಕೇಂದ್ರಕ್ಕೆ ಫಾರೂಕ್ ಅಬ್ದುಲ್ಲಾ ಪ್ರಶ್ನೆ
Updated on
ಕೇಂದ್ರ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿರುವ ಜಮ್ಮು-ಕಾಶ್ಮೀರದ ಮಾಜಿ ಸಿಎಂ ಫಾರೂಕ್ ಅಬ್ದುಲ್ಲಾ, ರೈತರ ಸಮಸ್ಯೆಗಳನ್ನು ಪರಿಹರಿಸಲು ರಾಮ ಸ್ವರ್ಗದಿಂದ ಇಳಿಯುತ್ತಾನಾ? ಎಂದು ಪ್ರಶ್ನಿಸಿದ್ದಾರೆ. 
ರಾಮ ಮಂದಿರ ವಿಷಯವನ್ನಿಟ್ಟುಕೊಂಡು ಜನರನ್ನು ಬಿಜೆಪಿ ಮೂರ್ಖರನ್ನಾಗಿಸುತ್ತಿದೆ. ರೈತರ ಸಮಸ್ಯೆಗಳನ್ನು, ನಿರುದ್ಯೋಗದ ಸಮಸ್ಯೆಗಳನ್ನು, ದಲಿತರ ಸಮಸ್ಯೆಗಳನ್ನು ನಿರ್ಲಕ್ಷಿಸುತ್ತಿದೆ ಎಂದು ಫಾರೂಕ್ ಅಬ್ದುಲ್ಲಾ ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದಾರೆ.
ಭಾರತದಲ್ಲಿ ನಿಜವಾದ ಸಮಸ್ಯೆಗಳ ಬಗ್ಗೆ ಹೋರಾಟ ನಡೆಯುತ್ತಿಲ್ಲ. ಆದರೆ ಬಿಜೆಪಿ ಸರ್ಕಾರ ರಾಮ ಮಂದಿರಕ್ಕಾಗಿ ಹೋರಾಟ ನಡೆಸುತ್ತಿದೆ. ಜನರನ್ನು ಮೂರ್ಖರನ್ನಾಗಿಸುವುದರ ಜೊತೆಗೆ ಕಾಶ್ಮೀರವನ್ನೂ ಹಾಳುಮಾಡುತ್ತಿದ್ದಾರೆ.  ದೇಶದ ಪರಿಸ್ಥಿತಿಯನ್ನು ಸುಧಾರಿಸಲು ರೈತರ ಸಮಸ್ಯೆಗಳನ್ನು ಪರಿಹರಿಸಲು ರಾಮ ಸ್ವರ್ಗದಿಂದ ಇಳಿಯುತ್ತಾನಾ? ಎಂದು ಫಾರೂಕ್ ಅಬ್ದುಲ್ಲಾ ಪ್ರಶ್ನಿಸಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com