ಸುಬ್ರಹ್ಮಣಿಯನ್ ಸ್ವಾಮಿ: ಉರ್ಜಿತ್ ಪಟೇಲ್ ಅವರ ರಾಜೀನಾಮೆಯನ್ನು ದೇಶದ ಆರ್ಥಿಕತೆಗೆ ಒಳ್ಳೆಯದಲ್ಲ ಎಂದು ಸ್ವತಃ ಆರ್ಥಿಕ ತಜ್ಞರೂ ಆಗಿರುವ ಬಿಜೆಪಿ ಸಂಸದ ಸುಬ್ರಹ್ಮಣಿಯನ್ ಸ್ವಾಮಿ ಹೇಳಿದ್ದಾರೆ. "ಉರ್ಜಿತ್ ಪಟೇಲ್ ರಾಜೀನಾಮೆ ದೇಶದ ಆರ್ಥಿಕತೆ, ಆರ್ ಬಿಐ, ಸರ್ಕಾರಗಳಿಗೆ ಒಳ್ಳೆಯದಲ್ಲ. ಮುಂದಿನ ಆರ್ ಬಿಐ ಗೌರ್ನರ್ ಬರುವವರೆಗೆ ಜುಲೈ ತಿಂಗಳ ವರೆಗೆ ಉರ್ಜಿತ್ ಪಟೇಲ್ ಅವರು ಗೌರ್ನರ್ ಸ್ಥಾನದಲ್ಲಿ ಮುಂದುವರೆಯಬೇಕು, ಪ್ರಧಾನಿ ನರೇಂದ್ರ ಮೋದಿ, ದೇಶದ ಹಿತಾಸಕ್ತಿಯಿಂದ ಉರ್ಜಿತ್ ಪಟೇಲ್ ಅವರೊಂದಿಗೆ ಮಾತುಕತೆ ನಡೆಸಿ ರಾಜೀನಾಮೆ ಹಿಂಪಡೆಯುವಂತೆ ಮನವೊಲಿಸಬೇಕು ಎಂದು ಸ್ವಾಮಿ ಹೇಳಿದ್ದಾರೆ.