ಬಿಜೆಪಿ ವಿರುದ್ಧ ಪ್ರತಿಪಕ್ಷಗಳು ಒಂದಾಗಿದ್ದು, 2019ರ ಲೋಕಸಭೆ ಚುನಾವಣೆಯನ್ನು ಒಗ್ಗಟ್ಟಿನಿಂದ ಎದುರಿಸುತ್ತೇವೆ. ಮುಂದಿನ ಲೋಕಸಭೆ ಚುನಾವಣೆಯಲ್ಲಿ ನಾವು ಗೆಲ್ಲಬೇಕು ಮತ್ತು ಗೆಲ್ಲುತ್ತೇವೆ. ಆದರೆ ಯಾರನ್ನೂ ದೇಶದಿಂದ ಹೊರ ಹಾಕುವುದಿಲ್ಲ ಎಂದು ರಾಹುಲ್ ಗಾಂಧಿ, ಬಿಜೆಪಿಯ ಕಾಂಗ್ರೆಸ್ ಮುಕ್ತ ಭಾರತ ಆಂದೋಲನಕ್ಕೆ ತಿರುಗೇಟು ನೀಡಿದರು.