ಸೋಲಿನ ಹೊಣೆ ಹೊರುತ್ತೇನೆ, ಜನರ ಪ್ರೀತಿಗೆ ಅಭಾರಿ: ಛತ್ತೀಸ್ ಗಢ ಸಿಎಂ ಸ್ಥಾನಕ್ಕೆ ರಾಜೀನಾಮೆ ನೀಡಿದ ರಮಣ್ ಸಿಂಗ್

ಛತ್ತೀಸ್ ಗಢ ವಿಧಾನಸಭಾ ಚುನಾವಣೆಯ ಫಲಿತಾಂಶ ಪ್ರಕಟವಾಗಿದ್ದು, ಬಿಜೆಪಿಯ ಸತತ 15 ವರ್ಷಗಳ ಆಡಳಿತವನ್ನು ಕೊನೆಗೊಳಿಸುವಲ್ಲಿ ಕಾಂಗ್ರೆಸ್ ಯಶಸ್ವಿಯಾಗಿದೆ.
ರಮಣ್ ಸಿಂಗ್
ರಮಣ್ ಸಿಂಗ್
ರಾಯ್ ಪುರ: ಛತ್ತೀಸ್ ಗಢ ವಿಧಾನಸಭಾ ಚುನಾವಣೆಯ ಫಲಿತಾಂಶ ಪ್ರಕಟವಾಗಿದ್ದು, ಬಿಜೆಪಿಯ ಸತತ 15 ವರ್ಷಗಳ ಆಡಳಿತವನ್ನು ಕೊನೆಗೊಳಿಸುವಲ್ಲಿ ಕಾಂಗ್ರೆಸ್ ಯಶಸ್ವಿಯಾಗಿದೆ. 
90 ಕ್ಷೇತ್ರಗಳಿರುವ ನಕ್ಸಲ್ ಪೀಡಿತ ರಾಜ್ಯದಲ್ಲಿ ಕಾಂಗ್ರೆಸ್ ಪಕ್ಷ 67 ಸ್ಥಾನಗಳೊಂದಿಗೆ ಅಧಿಕಾರಕ್ಕೇರಿದರೆ, 18 ಸ್ಥಾನಗಳಿಕೆ ಕುಸಿದಿರುವ ಬಿಜೆಪಿ ಹೀನಾಯ ಸೋಲು ಕಂಡಿದೆ. ಸೋಲಿನ ಹಿನ್ನೆಲೆಯಲ್ಲಿ ಛತ್ತೀಸ್ ಗಢ ಸಿಎಂ ಸ್ಥಾನಕ್ಕೆ ರಮಣ್ ಸಿಂಗ್ ರಾಜೀನಾಮೆ ನೀಡಿದ್ದಾರೆ. 
ರಾಜೀನಾಮೆ ಬಳಿಕ ಪ್ರತಿಕ್ರಿಯೆ ನೀಡಿರುವ ರಮಣ್ ಸಿಂಗ್, "ಜನತೆ 3 ಬಾರಿ ಆಡಳಿತ ನಡೆಸಲು ಅವಕಾಶ ನೀಡಿದ್ದರು, ನನ್ನ ಜೀವನ ಪೂರ್ತಿ ಕೆಲಸ ಮಾಡಿದರೂ ಜನತೆ ನನಗೆ ನೀಡಿರುವ ಪ್ರೀತಿ ಗೌರವಗಳನ್ನು ಹಿಂತಿರುಗಿಸುವುದಕ್ಕೆ ಆಗುವುದಿಲ್ಲ". ಇಂದು ರಾಜ್ಯಪಾಲರನ್ನು ಭೇಟಿ ಮಾಡಿ ರಾಜೀನಾಮೆ ನೀಡಿದ್ದೇನೆ.  ನನ್ನ ನೇತೃತ್ವದಲ್ಲಿ ಬಿಜೆಪಿ ಚುನಾವಣೆ ಎದುರಿಸಿದ್ದು, ಸೋಲಿನ ಹೊಣೆಯನ್ನೂ ನಾನೇ ಹೊರುತ್ತೇನೆ ಎಂದಿದ್ದಾರೆ. 

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com