ಮಿನಿ ಮಹಾಸಮರದಲ್ಲಿ ಗೆದ್ದ ಕಾಂಗ್ರೆಸ್, ಕೆಸಿಆರ್ ಗೆ ಪ್ರಧಾನಿ ಮೋದಿ ಅಭಿನಂದನೆ

ಮೂರು ರಾಜ್ಯಗಳಲ್ಲಿ ಗೆಲುವು ಸಾಧಿಸಿರುವ ಕಾಂಗ್ರೆಸ್ ಹಾಗೂ ತೆಲಂಗಾಣದಲ್ಲಿ ಮತ್ತೊಮ್ಮ ಅಧಿಕಾರ ಹಿಡಿಯುತ್ತಿರುವ ಕೆ. ಸಿ. ಚಂದ್ರಶೇಖರ್ ರಾವ್ ಹಾಗೂ ಮಿಜೋರಾಂನ ಎಂಎನ್ ಎಫ್ ಪಕ್ಷಗಳಿಗೆ ನರೇಂದ್ರ ಮೋದಿ ಅಭಿನಂದನೆ ಸಲ್ಲಿಸಿದ್ದಾರೆ.
ಪ್ರಧಾನಿ ಮೋದಿ
ಪ್ರಧಾನಿ ಮೋದಿ

ನವದೆಹಲಿ: ಪಂಚ ರಾಜ್ಯಗಳ ಚುನಾವಣೆ ಫಲಿತಾಂಶದ ಬಗ್ಗೆ ಪ್ರಧಾನಿ ನರೇಂದ್ರ ಮೋದಿ ಟ್ವೀಟರ್ ನಲ್ಲಿ ಪ್ರತಿಕ್ರಿಯಿಸಿದ್ದಾರೆ.

ಮೂರು ರಾಜ್ಯಗಳಲ್ಲಿ ಗೆಲುವು ಸಾಧಿಸಿರುವ ಕಾಂಗ್ರೆಸ್ ಹಾಗೂ ತೆಲಂಗಾಣದಲ್ಲಿ ಮತ್ತೊಮ್ಮ ಅಧಿಕಾರ ಹಿಡಿಯುತ್ತಿರುವ ಕೆ. ಸಿ. ಚಂದ್ರಶೇಖರ್ ರಾವ್ ಹಾಗೂ ಮಿಜೋರಾಂನ  ಎಂಎನ್ ಎಫ್ ಪಕ್ಷಗಳಿಗೆ ನರೇಂದ್ರ ಮೋದಿ ಅಭಿನಂದನೆ ಸಲ್ಲಿಸಿದ್ದಾರೆ.

ಜನರ ತೀರ್ಪುನ್ನು ನಾವು ಸ್ವೀಕರಿಸುತ್ತೇವೆ.  ಸೇವೆ ಮಾಡಲು ಅವಕಾಶ ಮಾಡಿಕೊಟ್ಟಿದ್ದ ಛತ್ತೀಸ್ ಗಡ, ಮಧ್ಯಪ್ರದೇಶ, ಹಾಗೂ ರಾಜಸ್ತಾನ ರಾಜ್ಯಗಳಿಗೆ ಜನರಿಗೆ ಧನ್ಯವಾದ ಆರ್ಪಿಸುವುದಾಗಿ ನರೇಂದ್ರ ಮೋದಿ ಹೇಳಿದ್ದಾರೆ.

ಈ ರಾಜ್ಯಗಳಲ್ಲಿ ಬಿಜೆಪಿ ಸರ್ಕಾರ ಜನರ ಕಲ್ಯಾಣ ನಿಟ್ಟಿನಲ್ಲಿ ದಣಿವರಿಯದ ಕೆಲಸ ಮಾಡಿರುವುದಾಗಿ ನರೇಂದ್ರ ಮೋದಿ ಟ್ವೀಟ್ ಸಂದೇಶದಲ್ಲಿ ತಿಳಿಸಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com