ಫಲಿತಾಂಶದ ಬಗ್ಗೆ ಮಾಧ್ಯಮಕ್ಕೆ ಪ್ರತಿಕ್ರಿಯಿಸಿದ ಸಂಜಯ್ ಕಾಕಡೆ ಅವರು, ರಾಜಸ್ಥಾನ ಮತ್ತು ಛತ್ತೀಸ್ ಗಢದ ಸೋಲು ನಿರೀಕ್ಷಿತ. ಆದರೆ ಮಧ್ಯ ಪ್ರದೇಶದಲ್ಲಿ ಹಿನ್ನಡೆ ಅನುಭವಿಸಿರುವುದು ಅಚ್ಚರಿ ಮೂಡಿಸಿದೆ. ನಾವು ಅಭಿವೃದ್ಧಿ ವಿಚಾರ ಮರೆತು ರಾಮ ಮಂದಿರ ನಿರ್ಮಾಣಕ್ಕೆ, ಪ್ರತಿಮೆ ನಿರ್ಮಾಣಕ್ಕೆ ಮತ್ತು ಹಲವು ನಗರಗಳ ಹೆಸರು ಬದಲಾವಣೆಗೆ ಹೆಚ್ಚು ಆದ್ಯತೆ ನೀಡಿದ್ದೇ ಈ ಸೋಲಿಗೆ ಕಾರಣ ಎಂದಿದ್ದಾರೆ.