ರಾಮ ಮಂದಿರ, ಪ್ರತಿಮೆ, ಹೆಸರು ಬದಲಾವಣೆ ಪಕ್ಷದ ಸೋಲಿಗೆ ಕಾರಣ: ಬಿಜೆಪಿ ಸಂಸದ

ರಾಮ ಮಂದಿರ ನಿರ್ಮಾಣ ವಿಚಾರ, ಪ್ರತಿಮೆ ಸ್ಥಾಪನೆ ಹಾಗೂ ಹಲವು ನಗರಗಳ ಹೆಸರು ಬದಲಾವಣೆಗೆ ಹೆಚ್ಚು ಗಮನ ಹರಿಸಿದ್ದೇ ಪಂಚ....
ಸಂಜಯ್ ಕಾಕಡೆ
ಸಂಜಯ್ ಕಾಕಡೆ
Updated on
ಮುಂಬೈ: ರಾಮ ಮಂದಿರ ನಿರ್ಮಾಣ ವಿಚಾರ, ಪ್ರತಿಮೆ ಸ್ಥಾಪನೆ ಹಾಗೂ ಹಲವು ನಗರಗಳ ಹೆಸರು ಬದಲಾವಣೆಗೆ ಹೆಚ್ಚು ಗಮನ ಹರಿಸಿದ್ದೇ ಪಂಚ ರಾಜ್ಯಗಳ ವಿಧಾನಸಭೆ ಚುನಾವಣೆಯಲ್ಲಿ ಬಿಜೆಪಿ ಸೋಲಿಗೆ ಕಾರಣ ಎಂದು ಬಿಜೆಪಿ ರಾಜ್ಯಸಭಾ ಸದಸ್ಯ ಸಂಜಯ್ ಕಾಕಡೆ ಅವರು ಹೇಳಿದ್ದಾರೆ.
ಮಧ್ಯ ಪ್ರದೇಶ, ರಾಜಸ್ಥಾನ. ಛತ್ತೀಸ್ ಗಢ, ತೆಲಂಗಾಣ ಮತ್ತು ಮಿಜೋರಾಂ ವಿಧಾನಸಭೆ ಚುನಾವಣೆ ಫಲಿತಾಂಶ ಪ್ರಕಟವಾಗಿದ್ದು, ಐದು ರಾಜ್ಯಗಳಲ್ಲೂ ಬಿಜೆಪಿ ಹಿನ್ನಡೆ ಅನುಭವಿಸಿದೆ.
ಫಲಿತಾಂಶದ ಬಗ್ಗೆ ಮಾಧ್ಯಮಕ್ಕೆ ಪ್ರತಿಕ್ರಿಯಿಸಿದ ಸಂಜಯ್ ಕಾಕಡೆ ಅವರು, ರಾಜಸ್ಥಾನ ಮತ್ತು ಛತ್ತೀಸ್ ಗಢದ ಸೋಲು ನಿರೀಕ್ಷಿತ. ಆದರೆ ಮಧ್ಯ ಪ್ರದೇಶದಲ್ಲಿ ಹಿನ್ನಡೆ ಅನುಭವಿಸಿರುವುದು ಅಚ್ಚರಿ ಮೂಡಿಸಿದೆ. ನಾವು ಅಭಿವೃದ್ಧಿ ವಿಚಾರ ಮರೆತು ರಾಮ ಮಂದಿರ ನಿರ್ಮಾಣಕ್ಕೆ, ಪ್ರತಿಮೆ ನಿರ್ಮಾಣಕ್ಕೆ ಮತ್ತು ಹಲವು ನಗರಗಳ ಹೆಸರು ಬದಲಾವಣೆಗೆ ಹೆಚ್ಚು ಆದ್ಯತೆ ನೀಡಿದ್ದೇ ಈ ಸೋಲಿಗೆ ಕಾರಣ ಎಂದಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com