ಇನ್ನು ಈ ಬಗ್ಗೆ ಬೆಳಗಾವಿಯಲ್ಲಿ ಮಾಧ್ಯಮಕ್ಕೆ ಪ್ರತಿಕ್ರಿಯಿಸಿದ ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ ಅವರು, ಕೇಂದ್ರದ ಚಿಂತನೆ ನನಗೆ ಅಚ್ಚರಿ ತಂದಿಲ್ಲ. ಮೂರು ತಿಂಗಳ ಹಿಂದೆಯೇ ಸಾಲಮನ್ನಾ ಚಿಂತನೆ ಬಗ್ಗೆ ನನಗೆ ಗೊತ್ತಿತ್ತು. ಕೇಂದ್ರದಲ್ಲೂ ನನಗೆ ಸ್ನೇಹಿತರಿದ್ದಾರೆ, ಅವರು ನನಗೆ ತಿಳಿಸಿದ್ದಾರೆ. ರೈತರ ಸಾಲಮನ್ನಾ ಮಾಡದಿದ್ದರೆ, ಚುನಾವಣೆ ಕಷ್ಟ ಎಂಬುದು ಕೇಂದ್ರ ಸರ್ಕಾರಕ್ಕೆ ಗೊತ್ತಿದೆ. ಹೀಗಾಗಿ ಮೋದಿ ಸಾಲಮನ್ನಾ ನಿರ್ಧಾರ ಕೈಗೊಂಡರೂ ಅಚ್ಚರಿಯಿಲ್ಲ ಎಂದಿದ್ದಾರೆ.