ನವದೆಹಲಿ: ಭಾರತ ಶಕ್ತಿ ಕೇಂದ್ರವೆಂದೇ ಗುರುತಿಸಲಾಗುವ ಸಂಸತ್ ಭವನದ ಮೇಲೆ ಭಯೋತ್ಪಾದಕ ದಾಳಿ ನಡೆದು ಇಂದಿಗೆ 17 ವರ್ಷಗಳಾದವು. ಈ ಹಿನ್ನೆಲೆಯಲ್ಲಿ ಪ್ರಧಾನಿ ನರೇಂದ್ರ ಮೋದಿ, ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ, ರಾಷ್ಟ್ರಪತಿ ರಾಮನಾಥ್ ಕೋವಿಂದ್, ಉಪರಾಷ್ಟ್ರಪತಿ ವೆಂಕಯ್ಯ ನಾಯ್ಡು ಸೇರಿ ಹಲವು ಗಣ್ಯರು ಭಯೋತ್ಪಾದಕರ ವಿರುದ್ಧ ಹೋರಾಡಿ ಹುತಾತ್ಮರಾದ ಯೋಧರನ್ನು ಸ್ಮರಿಸಿದ್ದಾರೆ.