ದಮನ್: ಉಕ್ಕಿನ ಕಾರ್ಖಾನೆಯಲ್ಲಿ ಸ್ಫೋಟ, ಮೂವರು ಕಾರ್ಮಿಕರು ಸಾವು

ಸಿಲ್ವಾಸ ಬಳಿ ಇರುವ ಉಕ್ಕಿನ ಕಾರ್ಖಾನೆಯೊಂದರಲ್ಲಿ ಗುರುವಾರ ಬೆಳಗ್ಗೆ ಸ್ಫೋಟ ಸಂಭವಿಸಿದ್ದು, ಘಟನೆಯಲ್ಲಿ ಮೂವರು
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ
ದಮನ್: ಸಿಲ್ವಾಸ ಬಳಿ ಇರುವ ಉಕ್ಕಿನ ಕಾರ್ಖಾನೆಯೊಂದರಲ್ಲಿ ಗುರುವಾರ ಬೆಳಗ್ಗೆ ಸ್ಫೋಟ ಸಂಭವಿಸಿದ್ದು, ಘಟನೆಯಲ್ಲಿ ಮೂವರು ಕಾರ್ಮಿಕರು ಮೃತಪಟ್ಟಿದ್ದಾರೆ ಮತ್ತುಇಬ್ಬರು ಗಂಭೀರವಾಗಿ ಗಾಯಗೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.
ಕೇಂದ್ರಾಡಳಿತ ಪ್ರದೇಶ ದಮನ್ ಮತ್ತು ದಿಯುದಿಂದ 54 ಕಿ.ಮೀ.ದೂರದಲ್ಲಿರುವ ಸಿಲ್ವಾಸ ಬಳಿ ಇರುವ ಶ್ರೀ ಕೃಷ್ಣ ಉಕ್ಕಿನ ಕಾರ್ಖಾನೆಯಲ್ಲಿ ಇಂದು ಬೆಳಗಿನ ಜಾವ 3 ಗಂಟೆಯ ಸುಮಾರಿಗೆ ಸ್ಫೋಟ ಸಂಭವಿಸಿದೆ ಎಂದು ಪೊಲೀಸ್ ಇನ್ಸ್ ಪೆಕ್ಟರ್ ಕೆಬಿ ಮಹಾಜನ್ ಅವರು ಹೇಳಿದ್ದಾರೆ.
ಕುಲುಮೆ ಸಮೀಪ ಕೆಲಸ ಮಾಡುತ್ತಿದ್ದ ಮೂವರು ಕಾರ್ಮಿಕರು ಮೃತಪಟ್ಟಿದ್ದು, ಇಬ್ಬರು ಗಾಯಗೊಂಡಿದ್ದಾರೆ. ಗಾಯಾಳುಗಳನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಇಬ್ಬರ ಸ್ಥಿತಿ ಗಂಭೀರವಾಗಿದೆ ಎಂದು ಮಹಾಜನ್ ತಿಳಿಸಿದ್ದಾರೆ.
ಮೃತ ಕಾರ್ಮಿಕರನ್ನು ರಾಜಕುಮಾರ್ ಭಂಕರ್(26), ತಿಲಕರಾಮ್ ಯಾದವ್(18) ಮತ್ತು ವಿಜಯ್ ಭಂಕರ್(20) ಎಂದು ಗುರುತಿಸಲಾಗಿದೆ.
ಸ್ಫೋಟಕ್ಕೆ ನಿಕರ ಕಾರಣ ಇನ್ನು ತಿಳಿದುಬಂದಿಲ್ಲ. ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ಆರಂಭಿಸಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com