ಭಾರತವನ್ನು ಸ್ವಾತಂತ್ರ್ಯ ನಂತರದ ಹಿಂದೂ ರಾಷ್ಟ್ರವೆಂದು ಘೋಷಿಸಬೇಕು- ಮೇಘಾಲಯ ಹೈಕೋರ್ಟ್ ನ್ಯಾಯಾಧೀಶರು
ಪಾಕಿಸ್ತಾನ ಹೇಗೆ ಇಸ್ಲಾಮಿಕ್ ರಾಷ್ಟ್ರವೆಂದು ಕರೆದುಕೊಳ್ಳುತ್ತಿದ್ದೆಯೋ ಅದೇ ರೀತಿಯಲ್ಲಿ ಭಾರತ ಕೂಡಾ ಹಿಂದೂ ರಾಷ್ಟ್ರವೆಂದು ಘೋಷಿಸಬೇಕಾಗಿದೆ ಎಂದು ಮೇಘಾಲಯದ ಹೈಕೋರ್ಟ್ ನ್ಯಾಯಾಧೀಶರು ಹೇಳಿದ್ದಾರೆ
ಶಿಲ್ಲಾಂಗ್ :ಪಾಕಿಸ್ತಾನ ಹೇಗೆ ಇಸ್ಲಾಮಿಕ್ ರಾಷ್ಟ್ರವೆಂದು ಕರೆದುಕೊಳ್ಳುತ್ತಿದ್ದೆಯೋ ಅದೇ ರೀತಿಯಲ್ಲಿ ಭಾರತವನ್ನೂ ಸ್ವಾತಂತ್ರ ಭಾರತದ ಹಿಂದೂ ರಾಷ್ಟ್ರವೆಂದು ಘೋಷಿಸಬೇಕಾಗಿದೆ ಎಂದು ಮೇಘಾಲಯದ ಹೈಕೋರ್ಟ್ ನ್ಯಾಯಾಧೀಶ ಸುದೀಪ್ ರಂಜನ್ ಸೇನ್ ಹೇಳಿದ್ದಾರೆ.
ಪಾಕಿಸ್ತಾನ, ಬಾಂಗ್ಲಾದೇಶ, ಅಪ್ಘಾನಿಸ್ತಾದಿಂದ ಬಂದಿರುವ ಜನರು ಭಾರತದೊಳಗೆ ವಾಸಿಸಲು ಅವಕಾಶ ಕಲ್ಪಿಸುವ ಕಾನೂನು ಜಾರಿಗೆ ತರುವಂತೆ ನ್ಯಾಯಾಧೀಶ ರಂಜನ್ ಸೇನ್, ಪ್ರಧಾನ ಮಂತ್ರಿ, ಗೃಹ ಸಚಿವರು, ಹಾಗೂ ಮತ್ತಿತರ ಶಾಸನ ರಚನಕಾರರ ಬಳಿ ಮನವಿ ಮಾಡಿಕೊಂಡಿದ್ದಾರೆ.