'ಮೋದಿ ಸರ್ಕಾರ ಜನತೆಗೆ ನೀಡಿದ್ದ ಭರವಸೆಗಳನ್ನು ಈಡೇರಿಸುವಲ್ಲಿ ವಿಫಲವಾಗಿದೆ. ಇದೇ ಕಾರಣಕ್ಕೆ ಜನ ಬಿಜೆಪಿಯನ್ನು ತಿರಸ್ಕರಿಸಿದ್ದಾರೆ. ಚುನಾವಣಾ ಪೂರ್ವದಲ್ಲಿ ಮೋದಿ ಸರ್ಕಾರ ನೀಡಿದ್ದ ಆಶ್ವಾಸನೆಗಳನ್ನು ಪ್ರಧಾನಿ ಮೋದಿಯೂ ಸೇರಿದಂತೆ ಆ ಪಕ್ಷದ ನಾಯಕರು ಮರೆತಿದ್ದಾರೆ. ಕಪ್ಪುಹಣವನ್ನು ದೇಶಕ್ಕೆ ವಾಪಸ್ ತರುವ ವಿಚಾರ, ರೈತರ ಬೆಳೆಗೆ ಬೆಂಬಲ ಬೆಲೆ, ಕೃಷಿ ಉತ್ಪಾದನೆಗಳಿಗೆ ಪ್ರೋತ್ಸಾಹ, ಅಧಿಕಾರದಲ್ಲಿ ಜನರ ಪಾಲ್ಗೊಳ್ಳುವಿಕೆ ಸೇರಿದಂತೆ ಬಿಜೆಪಿ ನೀಡಿದ್ದ ಯಾವುದೇ ಆಶ್ವಾಸನೆ ಈಡೇರಿಲ್ಲ. ಕೊಟ್ಟ ಮಾತನ್ನು ಅವರು ಮರೆತಿರಬಹುದು. ಆವರ ಮೇಲೆ ಭರವಸೆ ಇಟ್ಟು ಮತ ಹಾಕಿದ ಜನ ಎಂದಿಗೂ ಮರೆಯೊಲ್ಲ. ಇಂದಿನ ಚುನಾವಣಾ ಫಲಿತಾಂಶ ಮೋದಿ ಸರ್ಕಾರಕ್ಕೆ ಎಚ್ಚರಿಕೆ ಕರೆಗಂಟೆಯಾಗಿದ್ದು, 2019 ಲೋಕಸಭಾ ಚುನಾವಣೆಯ ವೇಳೆಗೆ ಸರ್ಕಾರ ತಾನು ನೀಡಿದ್ದ ಆಶ್ಸಾಸನೆಗಳನ್ನು ಈಡೇರಿಸದಿದ್ದರೆ ಇದೇ ರೀತಿಯ ಫಲಿತಾಂಶ ಪುನರಾವರ್ತನೆಯಾಗಬಹುದು ಎಂದು ಹೇಳಿದ್ದಾರೆ.