ನವದೆಹಲಿ: ಆಧಾರ್ ಸಂಖ್ಯೆಯನ್ನು ಕೇವಲ ಪಾನ್ ಕಾರ್ಡ್ ಹಾಗೂ ಸರ್ಕಾರದ ಸವಲತ್ತು ಸಿಗುವ ಯೋಜನೆಗಳ ಪ್ರಯೋಜನ ಪಡೆಯಲು ಮಾತ್ರ ಸಂಯೋಜಿಸಬೇಕು ಎಂಬ ಸರ್ವೋಚ್ಛ ನ್ಯಾಯಾಲಯ ಆದೇಶದ ಬೆನ್ನಲ್ಲೇ ಚುನಾವಣಾ ಆಯೋಗವು, ಮತದಾರರ ಗುರುತಿನ ಚೀಟಿಯನ್ನು ಆಧಾರ್ ಜೊತೆ ಸಂಯೋಜಿಸುವ ಪ್ರಸ್ತಾಪವನ್ನು ಕೇಂದ್ರ ಸರ್ಕಾರದ ಮುಂದೆ ಇರಿಸಲು ಚಿಂತನೆ ನಡೆಸಿದೆ ಎಂದು ತಿಳಿದುಬಂದಿದೆ.