ಇದರಂತೆ ಕಾಂಗ್ರೆಸ್ ಹಿರಿಯ ನಾಯಕ ಮಲ್ಲಿಕಾರ್ಜುನ ಖರ್ಗೆಯವರು ಮಾತನಾಡಿ, ನಾವು ಜಂಟಿ ಸಂಸದೀಯ ಸಮಿತಿ ತನಿಖೆಗೆ ಆಗ್ರಹಿಸಿದ್ದೆವು. ಈಗಲೂ ಆ ಮಾತಿಗೆ ಬದ್ಧರಾಗಿದ್ದೇವೆ. ಸುಪ್ರೀಂಕೋರ್ಟ್ ಆದೇಶದ ಬಗ್ಗೆ ನಾನು ಏನನ್ನೂ ಮಾತನಾಡುವುದಿಲ್ಲ. ಪಿಐಎಲ್ ಕುರಿತಂತೆ ನ್ಯಾಯಾಲಯ ನೀಡಿದ್ದ ತೀರ್ಪಿನ ಕುರಿತು ಗೃಹ ಸಚಿವರ ಅಸಮರ್ಪಕವಾಗಿ ಮಾತನಾಡುತ್ತಿದ್ದಾರೆಂದು ಹೇಳಿದ್ದಾರೆ.